<p><strong>ಮಡಿಕೇರಿ:</strong> ‘ತಾಯಿ ಮತ್ತು ತಾಯಿ ನಾಡು ಸ್ವರ್ಗಕ್ಕಿಂತ ಹೆಚ್ಚು’ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಡಾ.ಬಿ.ರಾಘವ ಪ್ರತಿಪಾದಿಸಿದರು.</p>.<p>ಇಲ್ಲಿ ಲೇಖಕಿ ತೆನ್ನೀರ ಟೀನಾ ಚಂಗಪ್ಪ ಅವರ ‘ಮಣ್ಣ್ರ ಋಣ’ (ಮಣ್ಣಿನ ಋಣ) ಕೃತಿಯನ್ನು ನಿವೃತ್ತ ಪ್ರಾಂಶುಪಾಲರಾದ ಡಾ.ಬೊಜ್ಜಂಗಡ ಅವನಿಜ ಸೋಮಯ್ಯ ಇಲ್ಲಿನ ಪತ್ರಿಕಾಭವನದಲ್ಲಿ ಶನಿವಾರ ಬಿಡುಗಡೆಗೊಳಿಸಿದರು. ಈ ವೇಳೆ ಮಾತನಾಡಿದ ಬಿ.ರಾಘವ, ‘ನಮ್ಮ ನಾಡು, ನುಡಿ, ಸಂಸ್ಕೃತಿಯನ್ನು ಯಾರೂ ಮರೆಯಬಾರದು. ನಾಡು ಬಿಟ್ಟು ಹೋದರೆ ಹೇಗೆಲ್ಲ ಕಷ್ಟಪಡಬೇಕು ಮತ್ತು ಅವಿಭಕ್ತ ಕುಟುಂಬ ಹೇಗೆ ವಿಭಕ್ತ ಕುಟುಂಬವಾಗುತ್ತದೆ ಎಂಬುದರ ಬಗ್ಗೆ ಲೇಖಕಿ ತೆನ್ನೀರ ಟೀನಾ ಚಂಗಪ್ಪ ಉತ್ತಮವಾಗಿ ವಿವರಿಸಿದ್ದಾರೆ’ ಎಂದು ತಿಳಿಸಿದರು.</p>.<p>ಪುಸ್ತಕದ ಲೇಖಕಿ ತೆನ್ನೀರ ಟೀನಾ ಚಂಗಪ್ಪ, ‘ಇದು ನನ್ನ 2ನೇ ಪುಸ್ತಕವಾಗಿದ್ದು, ನಾನು ಕೇಳಿದ ಮತ್ತು ನೋಡಿದ ಅಭಿಪ್ರಾಯ, ಅನುಭವ, ಕಷ್ಟ-ಸುಖಗಳನ್ನು ಆಧಾರವಾಗಿಟ್ಟುಕೊಂಡು ಅದಕ್ಕೆ ಕಥೆಯ ರೂಪವನ್ನು ನೀಡಿದ್ದೇನೆ’ ಎಂದು ತಿಳಿಸಿದರು.</p>.<p>‘ಕೊಡವ ಮಕ್ಕಡ ಕೂಟ ನನ್ನ ಎರಡು ಪುಸ್ತಕಗಳನ್ನು ಬಿಡುಗಡೆಗೊಳಿಸಲು ಸಹಕರಿಸಿದ್ದು, ಹೊಸ ಬರಹಗಾರರನ್ನು ಪ್ರೋತ್ಸಾಹಿಸುತ್ತಾ ಬರುತ್ತಿದೆ’ ಎಂದು ಶ್ಲಾಘಿಸಿದರು.</p>.<p>ಪ್ರಕಾಶಕ ಹಾಗೂ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮಾತನಾಡಿ, ‘ಕೂಟದ ಮೂಲಕ ಕೊಡವ ಸಂಸ್ಕೃತಿಯ ಬಗ್ಗೆ ಯುವಜನತೆಯಲ್ಲಿ ನಿರಂತರವಾಗಿ ಜಾಗೃತಿ ಹಾಗೂ ಆಸಕ್ತಿಯನ್ನು ಮೂಡಿಸುತ್ತಾ ಬರಲಾಗುತ್ತಿದೆ’ ಎಂದು ಹೇಳಿದರು.</p>.<p>ನಿವೃತ್ತ ಮುಖ್ಯೋಪಾಧ್ಯಾಯಿನಿ ತೆನ್ನೀರ ಡಾಟಿ ಗಣೇಶ್, ಬೊಟ್ಟೊಳಂಡ ನಿವ್ಯ ದೇವಯ್ಯ, ಐಚಂಡ ರಶ್ಮಿ ಮೇದಪ್ಪ, ಉಡುವೆರ ರೇಖಾ ರಘು, ಕುಳುವಂಡ ಶೃತಿ ಪೂಣಚ್ಚ, ಪೆಬ್ಬಟ್ಟಿರ ಶೀತಲ್ ಕಾರ್ಯಪ್ಪ, ಪೇರಿಯಂಡ ಯಶೋಧಾ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ‘ತಾಯಿ ಮತ್ತು ತಾಯಿ ನಾಡು ಸ್ವರ್ಗಕ್ಕಿಂತ ಹೆಚ್ಚು’ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಡಾ.ಬಿ.ರಾಘವ ಪ್ರತಿಪಾದಿಸಿದರು.</p>.<p>ಇಲ್ಲಿ ಲೇಖಕಿ ತೆನ್ನೀರ ಟೀನಾ ಚಂಗಪ್ಪ ಅವರ ‘ಮಣ್ಣ್ರ ಋಣ’ (ಮಣ್ಣಿನ ಋಣ) ಕೃತಿಯನ್ನು ನಿವೃತ್ತ ಪ್ರಾಂಶುಪಾಲರಾದ ಡಾ.ಬೊಜ್ಜಂಗಡ ಅವನಿಜ ಸೋಮಯ್ಯ ಇಲ್ಲಿನ ಪತ್ರಿಕಾಭವನದಲ್ಲಿ ಶನಿವಾರ ಬಿಡುಗಡೆಗೊಳಿಸಿದರು. ಈ ವೇಳೆ ಮಾತನಾಡಿದ ಬಿ.ರಾಘವ, ‘ನಮ್ಮ ನಾಡು, ನುಡಿ, ಸಂಸ್ಕೃತಿಯನ್ನು ಯಾರೂ ಮರೆಯಬಾರದು. ನಾಡು ಬಿಟ್ಟು ಹೋದರೆ ಹೇಗೆಲ್ಲ ಕಷ್ಟಪಡಬೇಕು ಮತ್ತು ಅವಿಭಕ್ತ ಕುಟುಂಬ ಹೇಗೆ ವಿಭಕ್ತ ಕುಟುಂಬವಾಗುತ್ತದೆ ಎಂಬುದರ ಬಗ್ಗೆ ಲೇಖಕಿ ತೆನ್ನೀರ ಟೀನಾ ಚಂಗಪ್ಪ ಉತ್ತಮವಾಗಿ ವಿವರಿಸಿದ್ದಾರೆ’ ಎಂದು ತಿಳಿಸಿದರು.</p>.<p>ಪುಸ್ತಕದ ಲೇಖಕಿ ತೆನ್ನೀರ ಟೀನಾ ಚಂಗಪ್ಪ, ‘ಇದು ನನ್ನ 2ನೇ ಪುಸ್ತಕವಾಗಿದ್ದು, ನಾನು ಕೇಳಿದ ಮತ್ತು ನೋಡಿದ ಅಭಿಪ್ರಾಯ, ಅನುಭವ, ಕಷ್ಟ-ಸುಖಗಳನ್ನು ಆಧಾರವಾಗಿಟ್ಟುಕೊಂಡು ಅದಕ್ಕೆ ಕಥೆಯ ರೂಪವನ್ನು ನೀಡಿದ್ದೇನೆ’ ಎಂದು ತಿಳಿಸಿದರು.</p>.<p>‘ಕೊಡವ ಮಕ್ಕಡ ಕೂಟ ನನ್ನ ಎರಡು ಪುಸ್ತಕಗಳನ್ನು ಬಿಡುಗಡೆಗೊಳಿಸಲು ಸಹಕರಿಸಿದ್ದು, ಹೊಸ ಬರಹಗಾರರನ್ನು ಪ್ರೋತ್ಸಾಹಿಸುತ್ತಾ ಬರುತ್ತಿದೆ’ ಎಂದು ಶ್ಲಾಘಿಸಿದರು.</p>.<p>ಪ್ರಕಾಶಕ ಹಾಗೂ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮಾತನಾಡಿ, ‘ಕೂಟದ ಮೂಲಕ ಕೊಡವ ಸಂಸ್ಕೃತಿಯ ಬಗ್ಗೆ ಯುವಜನತೆಯಲ್ಲಿ ನಿರಂತರವಾಗಿ ಜಾಗೃತಿ ಹಾಗೂ ಆಸಕ್ತಿಯನ್ನು ಮೂಡಿಸುತ್ತಾ ಬರಲಾಗುತ್ತಿದೆ’ ಎಂದು ಹೇಳಿದರು.</p>.<p>ನಿವೃತ್ತ ಮುಖ್ಯೋಪಾಧ್ಯಾಯಿನಿ ತೆನ್ನೀರ ಡಾಟಿ ಗಣೇಶ್, ಬೊಟ್ಟೊಳಂಡ ನಿವ್ಯ ದೇವಯ್ಯ, ಐಚಂಡ ರಶ್ಮಿ ಮೇದಪ್ಪ, ಉಡುವೆರ ರೇಖಾ ರಘು, ಕುಳುವಂಡ ಶೃತಿ ಪೂಣಚ್ಚ, ಪೆಬ್ಬಟ್ಟಿರ ಶೀತಲ್ ಕಾರ್ಯಪ್ಪ, ಪೇರಿಯಂಡ ಯಶೋಧಾ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>