<p><strong>ಮಡಿಕೇರಿ:</strong> ‘ನಮ್ಮ ಉಡುಪು ನಮ್ಮ ಹಕ್ಕು’ ಇದನ್ನು ಧರಿಸಲು ಯಾರ ಅಪ್ಪಣೆಯೂ ಬೇಕಿಲ್ಲ. ಅವರವರ ಸಮುದಾಯದ ಸಾಂಪ್ರದಾಯಿಕ ಉಡುಪು ಧರಿಸುವ ಹಕ್ಕನ್ನು ಸಂವಿಧಾನ ನೀಡಿದೆ ಎಂದು ಕಟ್ಟೆಮಾಡು ಗ್ರಾಮದ ಕಳ್ಳೀರ ಹರೀಶ್ ಹೇಳಿದರು.</p>.<p>ಆವರೆಮಾದಂಡ, ನಂದೇಟಿರ, ಪಳಂಗಂಡ ಸೇರಿದಂತೆ ಅನೇಕ ಕೊಡವ ಕುಟುಂಬದವರು ದಾರಿಯನ್ನು ದಾನವಾಗಿ ನೀಡಿದ್ದಾರೆ. ಅವರಿಗೆ ಅವರ ಸಾಂಪ್ರದಾಯಿಕ ಉಡುಪು ಧರಿಸುವುದು ಬೇಡ ಎಂದು ಹೇಳುವುದು ಎಷ್ಟು ಸರಿ ಎಂದು ಅವರು ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.</p>.<p>ಗ್ರಾಮದ ಸಾದೇರ ರಮೇಶ್ ಮಾತನಾಡಿ, ‘ನಾವು ಅಲ್ಲಿ ಗಲಾಟೆ ಮಾಡಿಲ್ಲ. ನಮ್ಮ ಉಡುಪು ಧರಿಸಿ ಹೋದ ನಮ್ಮನ್ನು ತಡೆದಿದ್ದು ಅವರೇ. ಗಲಾಟೆಗೆ ಈ ಬಗೆಯಲ್ಲಿ ತಡೆದಿದ್ದೇ ಕಾರಣ’ ಎಂದು ಅವರು ಪ್ರತಿಪಾದಿಸಿದರು.</p>.<p>‘ನಮ್ಮ ಸಾಂಪ್ರದಾಯಿಕ ಉಡುಪು ಧರಿಸಿ ದೇಗುಲದಲ್ಲಿ ಪೂಜೆ ಸಲ್ಲಿಸುವ ಅವಕಾಶ ನೀಡಬೇಕು’ ಎಂದು ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದ ಕಳ್ಳೀರ ಬೋಸ್ ಲವಪ್ಪ, ಚಂಗಣಮಕ್ಕಡ ವಿನು ಅಪ್ಪಯ್ಯ, ಪರಿಯಪ್ಪಮ್ಮನ ಮಹೇಶ್ ಒಕ್ಕೊರಲಿನಿಂದ ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ‘ನಮ್ಮ ಉಡುಪು ನಮ್ಮ ಹಕ್ಕು’ ಇದನ್ನು ಧರಿಸಲು ಯಾರ ಅಪ್ಪಣೆಯೂ ಬೇಕಿಲ್ಲ. ಅವರವರ ಸಮುದಾಯದ ಸಾಂಪ್ರದಾಯಿಕ ಉಡುಪು ಧರಿಸುವ ಹಕ್ಕನ್ನು ಸಂವಿಧಾನ ನೀಡಿದೆ ಎಂದು ಕಟ್ಟೆಮಾಡು ಗ್ರಾಮದ ಕಳ್ಳೀರ ಹರೀಶ್ ಹೇಳಿದರು.</p>.<p>ಆವರೆಮಾದಂಡ, ನಂದೇಟಿರ, ಪಳಂಗಂಡ ಸೇರಿದಂತೆ ಅನೇಕ ಕೊಡವ ಕುಟುಂಬದವರು ದಾರಿಯನ್ನು ದಾನವಾಗಿ ನೀಡಿದ್ದಾರೆ. ಅವರಿಗೆ ಅವರ ಸಾಂಪ್ರದಾಯಿಕ ಉಡುಪು ಧರಿಸುವುದು ಬೇಡ ಎಂದು ಹೇಳುವುದು ಎಷ್ಟು ಸರಿ ಎಂದು ಅವರು ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.</p>.<p>ಗ್ರಾಮದ ಸಾದೇರ ರಮೇಶ್ ಮಾತನಾಡಿ, ‘ನಾವು ಅಲ್ಲಿ ಗಲಾಟೆ ಮಾಡಿಲ್ಲ. ನಮ್ಮ ಉಡುಪು ಧರಿಸಿ ಹೋದ ನಮ್ಮನ್ನು ತಡೆದಿದ್ದು ಅವರೇ. ಗಲಾಟೆಗೆ ಈ ಬಗೆಯಲ್ಲಿ ತಡೆದಿದ್ದೇ ಕಾರಣ’ ಎಂದು ಅವರು ಪ್ರತಿಪಾದಿಸಿದರು.</p>.<p>‘ನಮ್ಮ ಸಾಂಪ್ರದಾಯಿಕ ಉಡುಪು ಧರಿಸಿ ದೇಗುಲದಲ್ಲಿ ಪೂಜೆ ಸಲ್ಲಿಸುವ ಅವಕಾಶ ನೀಡಬೇಕು’ ಎಂದು ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದ ಕಳ್ಳೀರ ಬೋಸ್ ಲವಪ್ಪ, ಚಂಗಣಮಕ್ಕಡ ವಿನು ಅಪ್ಪಯ್ಯ, ಪರಿಯಪ್ಪಮ್ಮನ ಮಹೇಶ್ ಒಕ್ಕೊರಲಿನಿಂದ ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>