<p>ಮಡಿಕೇರಿ: ‘ಕೇಂದ್ರ ಸರ್ಕಾರದಿಂದ ಬರ ಪರಿಹಾರ ಹಣ ಬರುವವರೆಗೂ ಕಾಯಬೇಕೋ ಅಥವಾ ನಾವೇ ರೈತರಿಗೆ ಪರಿಹಾರ ನೀಡಬೇಕೋ ಎಂಬ ಕುರಿತು ಮುಂದಿನ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗುವುದು’ ಎಂದು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ತಿಳಿಸಿದರು.</p>.<p>‘ಕೇಂದ್ರ ಸರ್ಕಾರ ಈ ಬಾರಿ ರಾಜ್ಯವನ್ನು ಹಿಂದೆಂದಿಗಿಂತಲೂ ಹೆಚ್ಚು ಕಡೆಗಣಿಸಿದೆ. ಬರ ಪರಿಹಾರದ ಕುರಿತು ಪ್ರತಿಕ್ರಿಯಿಸಿಲ್ಲ. ನರೇಗಾ ಯೋಜನೆಯಡಿ ₹600 ಕೋಟಿ ಕೂಲಿ ನೀಡಿಲ್ಲ. ಭೇಟಿ ಮಾಡಲೂ ಅವಕಾಶ ಕೊಡುತ್ತಿಲ್ಲ. ಈ ಬಗೆಯ ತಾತ್ಸಾರ ಒಕ್ಕೂಟ ವ್ಯವಸ್ಥೆಯಲ್ಲಿ ಒಳ್ಳೆಯದಲ್ಲ’ ಎಂದು ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಕೇಂದ್ರ ಹೀಗೆ ಮಾಡಿತು ಎಂದು ನಾವು ಸುಮ್ಮನಿರುವುದಿಲ್ಲ. ನಾವು ಯಾವಾಗಲೂ ರೈತರ ಪರವಾಗಿ ನಿಲ್ಲುತ್ತೇವೆ. ಯಾವ ಬಗೆಯಲ್ಲಿ ರೈತರಿಗೆ ನೆರವು ನೀಡಬೇಕು ಎನ್ನುವುದನ್ನು ಸಂಪುಟ ಸಭೆಯಲ್ಲಿ ಚರ್ಚಿಸುತ್ತೇವೆ’ ಎಂದರು.</p>.<p>‘ಮುಖ್ಯಮಂತ್ರಿ ಕುರಿತು ಪಕ್ಷದ ಹೈಕಮಾಂಡ್, ಕೆಪಿಸಿಸಿ ಅಧ್ಯಕ್ಷರು ಹಾಗೂ ಸಿದ್ದರಾಮಯ್ಯ ತೀರ್ಮಾನಿಸುತ್ತಾರೆ. ಇದರಲ್ಲಿ ನನ್ನ ಪಾತ್ರವೇನೂ ಇಲ್ಲ’ ಎಂದು ಹೇಳಿದರು.</p>.<p>‘ಆಯಾ ಸಮುದಾಯದ ನಾಯಕರು ತಮ್ಮ ಸಮುದಾಯದವರ ಮತಗಳಿಂದ ಅಧಿಕಾರಕ್ಕೆ ಬಂದಿದೆ ಎಂದು ಹೇಳಿಕೊಳ್ಳುವುದು ತಪ್ಪಲ್ಲ. ಆದರೆ, ವಾಸ್ತವದಲ್ಲಿ ಎಲ್ಲ ಸಮುದಾಯದವರ ಮತಗಳಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಡಿಕೇರಿ: ‘ಕೇಂದ್ರ ಸರ್ಕಾರದಿಂದ ಬರ ಪರಿಹಾರ ಹಣ ಬರುವವರೆಗೂ ಕಾಯಬೇಕೋ ಅಥವಾ ನಾವೇ ರೈತರಿಗೆ ಪರಿಹಾರ ನೀಡಬೇಕೋ ಎಂಬ ಕುರಿತು ಮುಂದಿನ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗುವುದು’ ಎಂದು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ತಿಳಿಸಿದರು.</p>.<p>‘ಕೇಂದ್ರ ಸರ್ಕಾರ ಈ ಬಾರಿ ರಾಜ್ಯವನ್ನು ಹಿಂದೆಂದಿಗಿಂತಲೂ ಹೆಚ್ಚು ಕಡೆಗಣಿಸಿದೆ. ಬರ ಪರಿಹಾರದ ಕುರಿತು ಪ್ರತಿಕ್ರಿಯಿಸಿಲ್ಲ. ನರೇಗಾ ಯೋಜನೆಯಡಿ ₹600 ಕೋಟಿ ಕೂಲಿ ನೀಡಿಲ್ಲ. ಭೇಟಿ ಮಾಡಲೂ ಅವಕಾಶ ಕೊಡುತ್ತಿಲ್ಲ. ಈ ಬಗೆಯ ತಾತ್ಸಾರ ಒಕ್ಕೂಟ ವ್ಯವಸ್ಥೆಯಲ್ಲಿ ಒಳ್ಳೆಯದಲ್ಲ’ ಎಂದು ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಕೇಂದ್ರ ಹೀಗೆ ಮಾಡಿತು ಎಂದು ನಾವು ಸುಮ್ಮನಿರುವುದಿಲ್ಲ. ನಾವು ಯಾವಾಗಲೂ ರೈತರ ಪರವಾಗಿ ನಿಲ್ಲುತ್ತೇವೆ. ಯಾವ ಬಗೆಯಲ್ಲಿ ರೈತರಿಗೆ ನೆರವು ನೀಡಬೇಕು ಎನ್ನುವುದನ್ನು ಸಂಪುಟ ಸಭೆಯಲ್ಲಿ ಚರ್ಚಿಸುತ್ತೇವೆ’ ಎಂದರು.</p>.<p>‘ಮುಖ್ಯಮಂತ್ರಿ ಕುರಿತು ಪಕ್ಷದ ಹೈಕಮಾಂಡ್, ಕೆಪಿಸಿಸಿ ಅಧ್ಯಕ್ಷರು ಹಾಗೂ ಸಿದ್ದರಾಮಯ್ಯ ತೀರ್ಮಾನಿಸುತ್ತಾರೆ. ಇದರಲ್ಲಿ ನನ್ನ ಪಾತ್ರವೇನೂ ಇಲ್ಲ’ ಎಂದು ಹೇಳಿದರು.</p>.<p>‘ಆಯಾ ಸಮುದಾಯದ ನಾಯಕರು ತಮ್ಮ ಸಮುದಾಯದವರ ಮತಗಳಿಂದ ಅಧಿಕಾರಕ್ಕೆ ಬಂದಿದೆ ಎಂದು ಹೇಳಿಕೊಳ್ಳುವುದು ತಪ್ಪಲ್ಲ. ಆದರೆ, ವಾಸ್ತವದಲ್ಲಿ ಎಲ್ಲ ಸಮುದಾಯದವರ ಮತಗಳಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>