<p><strong>ಮಡಿಕೇರಿ:</strong> ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿ ಅಪಘಾತ ಮಾಡಿದ ಆರೋಪಿ ತೀರ್ಥಪ್ರಸಾದ್ (51) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.</p>.<p>‘ಈತ ಗುಡ್ಡೆಹೊಸೂರು– ಸಿದ್ದಾಪುರ ರಸ್ತೆಯ ತೆಪ್ಪದಕಂಡಿ ಸೇತುವೆ ಸಮೀಪ ಮಹೀಂದ್ರಾ ಪಿಕಪ್ ವಾಹನ ಚಾಲನೆ ಮಾಡುತ್ತಾ ಕಾಲೇಜೊಂದರ ಬಸ್ ಹಿಂಬದಿಗೆ ಡಿಕ್ಕಿಪಡಿಸಿದ್ದ. ಇದರಿಂದ ಬಸ್ಗೆ ಹಾನಿಯಾಗಿತ್ತು. ಪ್ರಾಥಮಿಕ ತನಿಖೆಯಲ್ಲಿ ಆರೋಪಿ ಮದ್ಯಪಾನ ಮಾಡಿರುವುದು ಗೊತ್ತಾಗಿದೆ. ಹೀಗಾಗಿ, ಆತನನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ವಾಹನ ಚಾಲಕರು ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದರೆ ಅಪಘಾತ ಸಂಭವಿಸುವ ಹಾಗೂ ಅಪಘಾತದಲ್ಲಿ ಜೀವಕ್ಕೆ ಹಾನಿಯಾಗುವ ಬಗ್ಗೆ ಅರಿವಿದ್ದರೂ ಮದ್ಯಪಾನ ಮಾಡಿ ವಾಹನ ಚಲಾಯಿಸಿ ಅಪಘಾತ ಪಡಿಸಿದ್ದಲ್ಲಿ ಕೊಲೆಯಲ್ಲದ ಅಪರಾಧಿಕ ನರಹತ್ಯೆ ಎಂದು ಪರಿಗಣಿಸಲಾಗುತ್ತದೆ. ಇಂತಹ ವ್ಯಕ್ತಿಗೆ ಕನಿಷ್ಠ 3 ವರ್ಷಗಳ ಜೈಲು ಶಿಕ್ಷೆಯನ್ನು ಅಥವಾ ಗರಿಷ್ಠ 7 ವರ್ಷ ಜೈಲು ಶಿಕ್ಷೆಯನ್ನು ವಿಧಿಸಬಹುದಾಗಿದೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿ ಅಪಘಾತ ಮಾಡಿದ ಆರೋಪಿ ತೀರ್ಥಪ್ರಸಾದ್ (51) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.</p>.<p>‘ಈತ ಗುಡ್ಡೆಹೊಸೂರು– ಸಿದ್ದಾಪುರ ರಸ್ತೆಯ ತೆಪ್ಪದಕಂಡಿ ಸೇತುವೆ ಸಮೀಪ ಮಹೀಂದ್ರಾ ಪಿಕಪ್ ವಾಹನ ಚಾಲನೆ ಮಾಡುತ್ತಾ ಕಾಲೇಜೊಂದರ ಬಸ್ ಹಿಂಬದಿಗೆ ಡಿಕ್ಕಿಪಡಿಸಿದ್ದ. ಇದರಿಂದ ಬಸ್ಗೆ ಹಾನಿಯಾಗಿತ್ತು. ಪ್ರಾಥಮಿಕ ತನಿಖೆಯಲ್ಲಿ ಆರೋಪಿ ಮದ್ಯಪಾನ ಮಾಡಿರುವುದು ಗೊತ್ತಾಗಿದೆ. ಹೀಗಾಗಿ, ಆತನನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ವಾಹನ ಚಾಲಕರು ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದರೆ ಅಪಘಾತ ಸಂಭವಿಸುವ ಹಾಗೂ ಅಪಘಾತದಲ್ಲಿ ಜೀವಕ್ಕೆ ಹಾನಿಯಾಗುವ ಬಗ್ಗೆ ಅರಿವಿದ್ದರೂ ಮದ್ಯಪಾನ ಮಾಡಿ ವಾಹನ ಚಲಾಯಿಸಿ ಅಪಘಾತ ಪಡಿಸಿದ್ದಲ್ಲಿ ಕೊಲೆಯಲ್ಲದ ಅಪರಾಧಿಕ ನರಹತ್ಯೆ ಎಂದು ಪರಿಗಣಿಸಲಾಗುತ್ತದೆ. ಇಂತಹ ವ್ಯಕ್ತಿಗೆ ಕನಿಷ್ಠ 3 ವರ್ಷಗಳ ಜೈಲು ಶಿಕ್ಷೆಯನ್ನು ಅಥವಾ ಗರಿಷ್ಠ 7 ವರ್ಷ ಜೈಲು ಶಿಕ್ಷೆಯನ್ನು ವಿಧಿಸಬಹುದಾಗಿದೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>