<p><strong>ಮಡಿಕೇರಿ:</strong> ‘ಮಾದಕವಸ್ತು ಮುಕ್ತ ಕ್ಯಾಂಪಸ್’ ಎಂದು ಘೋಷಿಸಿಕೊಂಡ ಕಾಲೇಜುಗಳಿಗೆ ಮಾತ್ರವೇ ಮಾನ್ಯತೆ ನೀಡಲು ನಿರ್ಧರಿಸಲಾಗಿದೆ’ ಎಂದು ರಾಜೀವ್ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಬಿ.ಸಿ.ಭಗವಾನ್ ಅವರು ಶನಿವಾರ ಇಲ್ಲಿ ತಿಳಿಸಿದರು.</p>.<p>ಇಲ್ಲಿ ನಡೆದ ‘ನಶಾ ಮುಕ್ತ ಭಾರತ-ಸ್ವಾಸ್ಥ್ಯ ಭಾರತ’, ಅಂಗಾಂಗ ದಾನ ಅಭಿಯಾನದಲ್ಲಿ ಮಾತನಾಡಿ, ‘ದೇಶದಲ್ಲಿ ಶೇ 30ರಿಂದ 40ರಷ್ಟು ವಿದ್ಯಾರ್ಥಿಗಳು ಮಾದಕವಸ್ತುಗಳ ವ್ಯಸನಕ್ಕೆ ಒಳಗಾಗಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿ, ಕಾಲೇಜುಗಳನ್ನೂ ಮಾದಕವಸ್ತು ಮುಕ್ತವಾಗಿಸಲು ನಿರ್ಧರಿಸಲಾಗಿದೆ’ ಎಂದರು.</p>.<p>‘ಮಾದಕವಸ್ತುಗಳ ವಿರುದ್ಧ ಕಾರ್ಯಾಚರಣೆಗಾಗಿ ಪ್ರತಿ ಕಾಲೇಜಿನಲ್ಲೂ ಕಾರ್ಯಪಡೆ ರಚಿಸಬೇಕು. ಬಿಗಿಯಾದ ತಪಾಸಣೆ, ಪರೀಕ್ಷೆ ನಡೆಸಬೇಕು. ಶೀಘ್ರ ನಶಾಮುಕ್ತ ಕ್ಯಾಂಪಸ್ ಎಂದು ಘೋಷಿಸಬೇಕು’ ಎಂದು ಸೂಚಿಸಿದರು.</p>.<p>‘ಮುಂದಿನ ದಿನಗಳಲ್ಲಿ ಪ್ರತಿ ವಿದ್ಯಾರ್ಥಿಯನ್ನೂ ತಪಾಸಣೆಗೆ ಮತ್ತು ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಹೀಗಾಗಿ ಎಲ್ಲರೂ ಎಚ್ಚರದಿಂದಿರಬೇಕು. ಮದ್ಯ, ಮಾದಕವಸ್ತು ಚಟದಿಂದ ಮುಕ್ತರಾಗಬೇಕು’ ಎಂದು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ‘ಮಾದಕವಸ್ತು ಮುಕ್ತ ಕ್ಯಾಂಪಸ್’ ಎಂದು ಘೋಷಿಸಿಕೊಂಡ ಕಾಲೇಜುಗಳಿಗೆ ಮಾತ್ರವೇ ಮಾನ್ಯತೆ ನೀಡಲು ನಿರ್ಧರಿಸಲಾಗಿದೆ’ ಎಂದು ರಾಜೀವ್ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಬಿ.ಸಿ.ಭಗವಾನ್ ಅವರು ಶನಿವಾರ ಇಲ್ಲಿ ತಿಳಿಸಿದರು.</p>.<p>ಇಲ್ಲಿ ನಡೆದ ‘ನಶಾ ಮುಕ್ತ ಭಾರತ-ಸ್ವಾಸ್ಥ್ಯ ಭಾರತ’, ಅಂಗಾಂಗ ದಾನ ಅಭಿಯಾನದಲ್ಲಿ ಮಾತನಾಡಿ, ‘ದೇಶದಲ್ಲಿ ಶೇ 30ರಿಂದ 40ರಷ್ಟು ವಿದ್ಯಾರ್ಥಿಗಳು ಮಾದಕವಸ್ತುಗಳ ವ್ಯಸನಕ್ಕೆ ಒಳಗಾಗಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿ, ಕಾಲೇಜುಗಳನ್ನೂ ಮಾದಕವಸ್ತು ಮುಕ್ತವಾಗಿಸಲು ನಿರ್ಧರಿಸಲಾಗಿದೆ’ ಎಂದರು.</p>.<p>‘ಮಾದಕವಸ್ತುಗಳ ವಿರುದ್ಧ ಕಾರ್ಯಾಚರಣೆಗಾಗಿ ಪ್ರತಿ ಕಾಲೇಜಿನಲ್ಲೂ ಕಾರ್ಯಪಡೆ ರಚಿಸಬೇಕು. ಬಿಗಿಯಾದ ತಪಾಸಣೆ, ಪರೀಕ್ಷೆ ನಡೆಸಬೇಕು. ಶೀಘ್ರ ನಶಾಮುಕ್ತ ಕ್ಯಾಂಪಸ್ ಎಂದು ಘೋಷಿಸಬೇಕು’ ಎಂದು ಸೂಚಿಸಿದರು.</p>.<p>‘ಮುಂದಿನ ದಿನಗಳಲ್ಲಿ ಪ್ರತಿ ವಿದ್ಯಾರ್ಥಿಯನ್ನೂ ತಪಾಸಣೆಗೆ ಮತ್ತು ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಹೀಗಾಗಿ ಎಲ್ಲರೂ ಎಚ್ಚರದಿಂದಿರಬೇಕು. ಮದ್ಯ, ಮಾದಕವಸ್ತು ಚಟದಿಂದ ಮುಕ್ತರಾಗಬೇಕು’ ಎಂದು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>