ಅಂದು ನಡೆಯುವ ಕಾರ್ಯಕ್ರಮದಲ್ಲಿ ಮೈಸೂರಿನ ಶಿವಯೋಗಿ ಉರಿಲಿಂಗ ಪೆದ್ದಿಮಠ ಪೀಠಾಧ್ಯಕ್ಷ ಜ್ಞಾನಪ್ರಕಾಶ ಸ್ವಾಮೀಜಿ, ನಿವೃತ್ತ ಪ್ರಾಧ್ಯಾಪಕ ಮಹೇಶ್ ಚಂದ್ರಗುರು, ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಂ. ಸೋಮಶೇಖರ್ ಭಾಗವಹಿಸಲಿದ್ದಾರೆ. ಅಂಬೇಡ್ಕರ್ ಜಯಂತಿ ಪ್ರಯುಕ್ತ ದಲಿತ ಸಮಾಜಕ್ಕಾಗಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 24 ಮತ್ತು 25ರಂದು ಕ್ರಿಕೆಟ್, ಕಬಡ್ಡಿ ಹಾಗೂ ವಾಲಿಬಾಲ್ ಟೂರ್ನಿಗಳನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.