<p><strong>ಮಡಿಕೇರಿ</strong>: ಕುಶಾಲನಗರದ ದುಬಾರೆ ಸಾಕಾನೆ ಶಿಬಿರಕ್ಕೆ ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಆನೆ ಯೋಜನೆ) ಡಾ.ಮನೋಜ್ ರಾಜನ್ ಬುಧವಾರ ಭೇಟಿ ನೀಡಿದ ಪರಿಶೀಲನೆ ನಡೆಸಿದರು.</p>.<p>ಎರಡು ಸಾಕಾನೆಗಳ ನಡುವಿನ ಕಾದಾಟದಲ್ಲಿ ಸಿಲುಕಿ ಮಹಿಳೆ ಮೃತಪಟ್ಟ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ, ಅಲ್ಲಿದ್ದ ಎಲ್ಲ ಮಾವುತರು ಮತ್ತು ಕಾವಡಿಗಳಿಂದ ಮಾಹಿತಿ ಪಡೆದರು.</p>.<p>ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ‘ಮುಂದೆ ಇಂತಹ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಬೇಕು’ ಎಂದು ಸೂಚಿಸಿದರು.</p>.<p>ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್ಒಪಿ) ರೂಪುಗೊಳ್ಳುವವರೆಗೂ ದುಬಾರೆ ಹಾಗೂ ಹಾರಂಗಿ ಸಾಕಾನೆ ಶಿಬಿರಗಳನ್ನು ಪ್ರವಾಸಿಗರಿಗೆ ಮುಚ್ಚಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-51-358931239</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ಕುಶಾಲನಗರದ ದುಬಾರೆ ಸಾಕಾನೆ ಶಿಬಿರಕ್ಕೆ ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಆನೆ ಯೋಜನೆ) ಡಾ.ಮನೋಜ್ ರಾಜನ್ ಬುಧವಾರ ಭೇಟಿ ನೀಡಿದ ಪರಿಶೀಲನೆ ನಡೆಸಿದರು.</p>.<p>ಎರಡು ಸಾಕಾನೆಗಳ ನಡುವಿನ ಕಾದಾಟದಲ್ಲಿ ಸಿಲುಕಿ ಮಹಿಳೆ ಮೃತಪಟ್ಟ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ, ಅಲ್ಲಿದ್ದ ಎಲ್ಲ ಮಾವುತರು ಮತ್ತು ಕಾವಡಿಗಳಿಂದ ಮಾಹಿತಿ ಪಡೆದರು.</p>.<p>ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ‘ಮುಂದೆ ಇಂತಹ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಬೇಕು’ ಎಂದು ಸೂಚಿಸಿದರು.</p>.<p>ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್ಒಪಿ) ರೂಪುಗೊಳ್ಳುವವರೆಗೂ ದುಬಾರೆ ಹಾಗೂ ಹಾರಂಗಿ ಸಾಕಾನೆ ಶಿಬಿರಗಳನ್ನು ಪ್ರವಾಸಿಗರಿಗೆ ಮುಚ್ಚಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-51-358931239</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>