ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದುಬಾರೆ: ಗಜ ಪಯಣಕ್ಕೆ ಚಾಲನೆ

Last Updated 12 ಸೆಪ್ಟೆಂಬರ್ 2021, 15:35 IST
ಅಕ್ಷರ ಗಾತ್ರ

ಕುಶಾಲನಗರ: ಕೊಡಗು ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾದ ದುಬಾರೆ ಸಾಕಾನೆ ಶಿಬಿರದಿಂದ ಮೈಸೂರು ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಭಾನುವಾರ ಗಜಪಯಣಕ್ಕೆ ಚಾಲನೆ ನೀಡಲಾಯಿತು.

ಶಿಬಿರದ ಸಾಕಾನೆಗಳಾದ ವಿಕ್ರಂ, ಧನಂಜಯ ಹಾಗೂ ಕಾವೇರಿ ಆನೆಗಳಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಮೊದಲ ಹಂತದ ಆನೆಗಳ ತಂಡಕ್ಕೆ ಬೀಳ್ಕೊಡಲಾಯಿತು.

ಕಾವೇರಿ ನದಿ ದಂಡೆ ಮೇಲಿರುವ ಸಾಕಾನೆ ಶಿಬಿರದಲ್ಲಿ ಮೂರು ಸಾಕಾನೆಗಳಿಗೆ ಮಾವುತರು ಪೂಜೆ ಸಲ್ಲಿಸಿ ಹಣ್ಣು ಹಂಪಲುಗಳನ್ನು ನೀಡಿ ನಂತರ ಲಾರಿಗಳ ಮೂಲಕ ಮೈಸೂರಿಗೆ ತೆರಳಿದರು. ಆನೆಗಳೊಂದಿಗೆ ಮಾವುತರು ಹಾಗೂ ಕುಟುಂಬದವರು ತೆರಳಿದರು. ಈ ಸಂದರ್ಭ ದುಬಾರೆ ಉಪ ವಲಯ ಅರಣ್ಯಾಧಿಕಾರಿ ರಂಜನ್, ಸಿಬ್ಬಂದಿ ಹಾಗೂ ಮಾವುತರು ಹಾಗೂ ಕಾವಾಡಿಗರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT