ಕಾವೇರಿ ನದಿ ದಂಡೆ ಮೇಲಿರುವ ಸಾಕಾನೆ ಶಿಬಿರದಲ್ಲಿ ಮೂರು ಸಾಕಾನೆಗಳಿಗೆ ಮಾವುತರು ಪೂಜೆ ಸಲ್ಲಿಸಿ ಹಣ್ಣು ಹಂಪಲುಗಳನ್ನು ನೀಡಿ ನಂತರ ಲಾರಿಗಳ ಮೂಲಕ ಮೈಸೂರಿಗೆ ತೆರಳಿದರು. ಆನೆಗಳೊಂದಿಗೆ ಮಾವುತರು ಹಾಗೂ ಕುಟುಂಬದವರು ತೆರಳಿದರು. ಈ ಸಂದರ್ಭ ದುಬಾರೆ ಉಪ ವಲಯ ಅರಣ್ಯಾಧಿಕಾರಿ ರಂಜನ್, ಸಿಬ್ಬಂದಿ ಹಾಗೂ ಮಾವುತರು ಹಾಗೂ ಕಾವಾಡಿಗರು ಹಾಜರಿದ್ದರು.