ಕೊಡಗು ಜಿಲ್ಲೆಯ ಸುಂಟಿಕೊಪ್ಪ ವ್ಯಾಪ್ತಿಯಲ್ಲೂ ಬೆಳಗಿನ ಜಾವ 4.30ರ ಸಮಯದಲ್ಲಿ ಭೂಕಂಪನದ ಅನುಭವ ಆಗಿದೆ. ಅದೇ ರೀತಿ ಸುಂಟಿಕೊಪ್ಪ ನಾಕೂರು, ಕಾನ್ ಬೈಲ್ ಗ್ರಾಮದಲ್ಲೂ ಸಣ್ಣ ಪ್ರಮಾಣದ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.
ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಕೊಡಗು ಜಿಲ್ಲೆಯ ಭೂ ವಿಜ್ಞಾನಿ ಶ್ರೀನಿವಾಸ್, ಪಕ್ಕದ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ 3.4 ತೀವ್ರತೆ ಕಂಪನ ಉಂಟಾಗಿದ್ದು, ಅದರ ಕಂಪನದ ಅನುಭವ ಇಲ್ಲೂ ಉಂಟಾಗಿದೆ. ಯಾವುದೆ ಹಾನಿ ಸಂಭವಿಸಿಲ್ಲ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವಿಜ್ಞಾನಿಗಳು ಹೇಳಿದ್ದಾರೆ ಎಂದು ತಿಳಿಸಿದರು.