ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗು ಜಿಲ್ಲೆಯ ಕೆಲವೆಡೆ ಭೂಮಿ ಕಂಪಿಸಿದ ಅನುಭವ

ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲೆಯ ಕೆಲವೆಡೆ ಗುರುವಾರ ನಸುಕಿನಲ್ಲಿ ಭೂಮಿ‌ ಕಂಪಿಸಿದ ಅನುಭವವಾಗಿದೆ.

ಸೋಮವಾರಪೇಟೆ ಪಟ್ಟಣದ ರೇಂಜರ್ ಬ್ಲಾಕ್ ಮತ್ತು ನೇಗಳ್ಳೆ ಗ್ರಾಮದ ಜನರಿಗೆ ನಸುಕಿನಲ್ಲಿ ಅನುಭವಕ್ಕೆ ಬಂದಿದೆ.

ಮಡಿಕೇರಿ ತಾಲೂಕಿನ ದೇವಸ್ತೂರು ಸೇರಿದಂತೆ ಮಡಿಕೇರಿ ನಗರದಲ್ಲೂ ಸಣ್ಣ ಪ್ರಮಾಣದ ಕಂಪನದ ಅನುಭವ ಕೆಲವರಿಗಾಗಿದೆ.

ಕೊಡಗು ಜಿಲ್ಲೆಯ ಸುಂಟಿಕೊಪ್ಪ ವ್ಯಾಪ್ತಿಯಲ್ಲೂ ಬೆಳಗಿನ ಜಾವ 4.30ರ ಸಮಯದಲ್ಲಿ ಭೂಕಂಪನದ ಅನುಭವ ಆಗಿದೆ. ಅದೇ ರೀತಿ ಸುಂಟಿಕೊಪ್ಪ ನಾಕೂರು, ಕಾನ್ ಬೈಲ್ ಗ್ರಾಮದಲ್ಲೂ ಸಣ್ಣ ಪ್ರಮಾಣದ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಗ್ರಾಮಸ್ಥರು ಮಾಹಿತಿ‌ ನೀಡಿದ್ದಾರೆ.

ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಕೊಡಗು ಜಿಲ್ಲೆಯ ಭೂ ವಿಜ್ಞಾನಿ ಶ್ರೀನಿವಾಸ್, ಪಕ್ಕದ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ 3.4 ತೀವ್ರತೆ ಕಂಪನ ಉಂಟಾಗಿದ್ದು, ಅದರ ಕಂಪನದ ಅನುಭವ ಇಲ್ಲೂ ಉಂಟಾಗಿದೆ. ಯಾವುದೆ ಹಾನಿ ಸಂಭವಿಸಿಲ್ಲ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವಿಜ್ಞಾನಿಗಳು ಹೇಳಿದ್ದಾರೆ ಎಂದು ತಿಳಿಸಿದರು‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT