ಜಿಲ್ಲೆಯಲ್ಲಿ ಶನಿವಾರ ರಾತ್ರಿ ಇಡೀ ಹಾಗೂ ಭಾನುವಾರ ಬೆಳಿಗ್ಗೆ ಭಾರಿ ಮಳೆ ಸುರಿದಿದೆ. ಇದರಿಂದ ಜಿಲ್ಲೆಯ ಕಿಂಡಿ ಅಣೆಕಟ್ಟು ತುಂಬಿ ನೀರು ಸಂಪಾಜೆಯ ಕೊಯನಾಡಿನ ಮನೆಗಳಿಗೆ ನುಗ್ಗಿದೆ. ನೀರಿನ ಹರಿವು ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿದ್ದು, ಮಂಗಳೂರು- ಮಡಿಕೇರಿ ರಸ್ತೆಗೂ ನುಗ್ಗುವ ಭೀತಿ ಎದುರಾಗಿದೆ. ಜಿಲ್ಲಾಡಳಿತದಿಂದ ಯಾರೊಬ್ಬರೂ ಬಂದಿಲ್ಲ. ಗ್ರಾಮಸ್ಥರ ನೆರವಿನಿಂದ ಸುರಕ್ಷಿತ ಸ್ಥಳಕ್ಕೆ ತೆರಳುತ್ತಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.