<p><strong>ಮಡಿಕೇರಿ:</strong> ಕೊಡಗು ಜಿಲ್ಲೆಯಲ್ಲಿ ಶ್ರದ್ಧಾ, ಭಕ್ತಿಯಿಂದ ಈದ್ ಮಿಲಾದ್ ಅನ್ನು ಶುಕ್ರವಾರ ಆಚರಿಸಲಾಯಿತು. ಹಲವೆಡೆ ಮೆರವಣಿಗೆಗಳು ನಡೆದವು. ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆಗಳು ನೆರವೇರಿದವು. ಮುಸ್ಲಿಮರ ಮನೆಮನೆಗಳಲ್ಲಿ ಮಕ್ಕಳು ಹೊಸಬಟ್ಟೆ ತೊಟ್ಟು ಹಬ್ಬ ಆಚರಿಸಿದರು.</p>.<p>ಮಡಿಕೇರಿಯಲ್ಲಿ ಬದ್ರಿಯ ಜಮಾಹತ್ ವತಿಯಿಂದ ಧ್ವಜಾರೋಹಣ ನೆರವೇರಿಸಲಾಯಿತು. ನಗರಸಭೆ ಸದಸ್ಯ ಅಮಿನ್ ಮೊಹಿಸಿನ್ ಧ್ವಜಾರೋಹಣ ನೆರವೇರಿಸಿದರು.</p>.<p>ಧರ್ಮಗುರು ಸದರ್ ಹನೀಫ್ ಫೈಜಿ ಅವರು ಧರ್ಮ ಸಂದೇಶ ನೀಡಿದರು. ಅಲೀಲ್ ಲತೀಶಿ ಭಾಗವಹಿಸಿದ್ದರು. ಸಂಜೆ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.</p>.<p><strong>ಸೆ. 7ರಂದು ಬೃಹತ್ ಮೆರವಣಿಗೆ:</strong> ಹಬ್ಬದ ಪ್ರಯುಕ್ತ ಸೆ.7ರಂದು ಬೆಳಿಗ್ಗೆ 8 ಗಂಟೆಯಿಂದ ಮಡಿಕೇರಿಯಲ್ಲಿ ಬೃಹತ್ ಮೆರವಣಿಗೆ ನಡೆಯಲಿದೆ ಎಂದು ಅಮಿನ್ ಮೊಹಿಸಿನ್ ತಿಳಿಸಿದರು.</p>.<p>ಗದ್ದಿಗೆಯಿಂದ ಆರಂಭವಾಗುವ ಮೆರವಣಿಗೆಯು ಮಹದೇವಪೇಟೆ ಮುಖ್ಯರಸ್ತೆಯಲ್ಲಿ ಸಾಗಿ ಇಂದಿರಾಗಾಂಧಿ ವೃತ್ತ (ಚೌಕಿ)ದ ಮೂಲಕ ಹಳೆಯ ಖಾಸಗಿ ಬಸ್ನಿಲ್ದಾಣ ತಲುಪಿ, ಅಲ್ಲಿಂದ ವಾಪಸ್ ಗಣಪತಿ ಬೀದಿಯ ಮೂಲಕ ಬದ್ರಿಯಾ ಮಸೀದಿಯನ್ನು ತಲುಪಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಕೊಡಗು ಜಿಲ್ಲೆಯಲ್ಲಿ ಶ್ರದ್ಧಾ, ಭಕ್ತಿಯಿಂದ ಈದ್ ಮಿಲಾದ್ ಅನ್ನು ಶುಕ್ರವಾರ ಆಚರಿಸಲಾಯಿತು. ಹಲವೆಡೆ ಮೆರವಣಿಗೆಗಳು ನಡೆದವು. ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆಗಳು ನೆರವೇರಿದವು. ಮುಸ್ಲಿಮರ ಮನೆಮನೆಗಳಲ್ಲಿ ಮಕ್ಕಳು ಹೊಸಬಟ್ಟೆ ತೊಟ್ಟು ಹಬ್ಬ ಆಚರಿಸಿದರು.</p>.<p>ಮಡಿಕೇರಿಯಲ್ಲಿ ಬದ್ರಿಯ ಜಮಾಹತ್ ವತಿಯಿಂದ ಧ್ವಜಾರೋಹಣ ನೆರವೇರಿಸಲಾಯಿತು. ನಗರಸಭೆ ಸದಸ್ಯ ಅಮಿನ್ ಮೊಹಿಸಿನ್ ಧ್ವಜಾರೋಹಣ ನೆರವೇರಿಸಿದರು.</p>.<p>ಧರ್ಮಗುರು ಸದರ್ ಹನೀಫ್ ಫೈಜಿ ಅವರು ಧರ್ಮ ಸಂದೇಶ ನೀಡಿದರು. ಅಲೀಲ್ ಲತೀಶಿ ಭಾಗವಹಿಸಿದ್ದರು. ಸಂಜೆ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.</p>.<p><strong>ಸೆ. 7ರಂದು ಬೃಹತ್ ಮೆರವಣಿಗೆ:</strong> ಹಬ್ಬದ ಪ್ರಯುಕ್ತ ಸೆ.7ರಂದು ಬೆಳಿಗ್ಗೆ 8 ಗಂಟೆಯಿಂದ ಮಡಿಕೇರಿಯಲ್ಲಿ ಬೃಹತ್ ಮೆರವಣಿಗೆ ನಡೆಯಲಿದೆ ಎಂದು ಅಮಿನ್ ಮೊಹಿಸಿನ್ ತಿಳಿಸಿದರು.</p>.<p>ಗದ್ದಿಗೆಯಿಂದ ಆರಂಭವಾಗುವ ಮೆರವಣಿಗೆಯು ಮಹದೇವಪೇಟೆ ಮುಖ್ಯರಸ್ತೆಯಲ್ಲಿ ಸಾಗಿ ಇಂದಿರಾಗಾಂಧಿ ವೃತ್ತ (ಚೌಕಿ)ದ ಮೂಲಕ ಹಳೆಯ ಖಾಸಗಿ ಬಸ್ನಿಲ್ದಾಣ ತಲುಪಿ, ಅಲ್ಲಿಂದ ವಾಪಸ್ ಗಣಪತಿ ಬೀದಿಯ ಮೂಲಕ ಬದ್ರಿಯಾ ಮಸೀದಿಯನ್ನು ತಲುಪಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>