<p><strong>ಮಡಿಕೇರಿ:</strong> ಭಾರತ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ದೀಪ್ ಮಾಲಾ ನೇತೃತ್ವದ ತಂಡವು ಈಚೆಗೆ ಕೊಡಗು ಜಿಲ್ಲೆಗೆ ಭೇಟಿ ನೀಡಿ ಬೂತ್ ಮಟ್ಟದ ಅಧಿಕಾರಿಗಳಿಗೆ ತರಬೇತಿ ಮತ್ತು ಚುನಾವಣಾ ಪ್ರಕ್ರಿಯೆ ಬಗ್ಗೆ ಮಾಹಿತಿ ಹಂಚಿಕೊಂಡಿತು.</p>.<p>ತಂಡವು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೂತ್ ಮಟ್ಟದ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ ನಡೆಸಿದರು.</p>.<p>ತಂಡದಲ್ಲಿ ಅಧೀನ ಕಾರ್ಯದರ್ಶಿ ದೀಪ್ ಮಾಲಾ, ಸಹಾಯಕ ವಿಭಾಗಾಧಿಕಾರಿಗಳಾದ ಜ್ಯೋತ್ಸಾನಾ ಮಿಗ್ಲಾನಿ, ಶುಭಮ್ ಮಿಶ್ರಾ ಪ್ರಿನ್ಸ್ ರೈ, ಜಾವೇದ್ ಖಾನ್, ಅಂಕುರ್ ಮಲಿಕ್, ಪ್ರದೀಪ್ ಕೌರ್, ಆಯುಷಿ ನಾಯಕ್ ಮತ್ತು ಮೊಹಮ್ಮದ್ ಅರ್ಷದ್ ಇದ್ದರು. ಇವರು ಮತದಾನ ಕೇಂದ್ರಗಳಿಗೆ ಭೇಟಿ ನೀಡಿದರು.</p>.<p>‘ಭಾರತದ ವಿಶಿಷ್ಟ, ದೂರಸ್ಥ ಮತಗಟ್ಟೆಗಳಿಗೆ ಭೇಟಿ ನೀಡುವುದು’ ಎಂಬ ಈ ಯೋಜನೆಯು ಬೂತ್ ಮಟ್ಟದ ಅಧಿಕಾರಿಗಳಿಗೆ ತರಬೇತಿ ನೀಡುವುದರೊಂದಿಗೆ ಸವಾಲಿನ ಭೌಗೋಳಿಕ ಪ್ರದೇಶಗಳಲ್ಲಿ ಪ್ರಜಾಪ್ರಭುತ್ವದಲ್ಲಿ ಭಾಗವಹಿಸುವಿಕೆಯನ್ನು ಬಲಪಡಿಸುವ ಗುರಿಯನ್ನು ಹೊಂದಿದೆ’ ಎಂದು ಅವರು ಹೇಳಿದರು.</p>.<p>ಈ ಸಂಘಟಿತ ಪ್ರಯತ್ನವು, ಭೌಗೋಳಿಕ ಸ್ಥಳವನ್ನು ಲೆಕ್ಕಿಸದೆ, ಎಲ್ಲಾ ನಾಗರಿಕರಿಗೂ ಸಮಗ್ರ ಮತ್ತು ಪ್ರವೇಶಿಸಬಹುದಾದ ಚುನಾವಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳುವ ಇಸಿಐನ ಬದ್ಧತೆಯನ್ನು ಒತ್ತಿಹೇಳುತ್ತದೆ ಎಂದು ವಿವರಿಸಿದರು.</p>.<p>ಕಾರುಗುಂದ ಮತ್ತು ಕುಂದಚೇರಿ ಹಾಗೂ ಕೋಪಟ್ಟಿ ಮತಗಟ್ಟೆಗಳಿಗೆ ಭೇಟಿ ನೀಡಿ ಸೌಲಭ್ಯಗಳ ಬಗ್ಗೆ ಪರಿಶೀಲಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಭಾರತ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ದೀಪ್ ಮಾಲಾ ನೇತೃತ್ವದ ತಂಡವು ಈಚೆಗೆ ಕೊಡಗು ಜಿಲ್ಲೆಗೆ ಭೇಟಿ ನೀಡಿ ಬೂತ್ ಮಟ್ಟದ ಅಧಿಕಾರಿಗಳಿಗೆ ತರಬೇತಿ ಮತ್ತು ಚುನಾವಣಾ ಪ್ರಕ್ರಿಯೆ ಬಗ್ಗೆ ಮಾಹಿತಿ ಹಂಚಿಕೊಂಡಿತು.</p>.<p>ತಂಡವು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೂತ್ ಮಟ್ಟದ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ ನಡೆಸಿದರು.</p>.<p>ತಂಡದಲ್ಲಿ ಅಧೀನ ಕಾರ್ಯದರ್ಶಿ ದೀಪ್ ಮಾಲಾ, ಸಹಾಯಕ ವಿಭಾಗಾಧಿಕಾರಿಗಳಾದ ಜ್ಯೋತ್ಸಾನಾ ಮಿಗ್ಲಾನಿ, ಶುಭಮ್ ಮಿಶ್ರಾ ಪ್ರಿನ್ಸ್ ರೈ, ಜಾವೇದ್ ಖಾನ್, ಅಂಕುರ್ ಮಲಿಕ್, ಪ್ರದೀಪ್ ಕೌರ್, ಆಯುಷಿ ನಾಯಕ್ ಮತ್ತು ಮೊಹಮ್ಮದ್ ಅರ್ಷದ್ ಇದ್ದರು. ಇವರು ಮತದಾನ ಕೇಂದ್ರಗಳಿಗೆ ಭೇಟಿ ನೀಡಿದರು.</p>.<p>‘ಭಾರತದ ವಿಶಿಷ್ಟ, ದೂರಸ್ಥ ಮತಗಟ್ಟೆಗಳಿಗೆ ಭೇಟಿ ನೀಡುವುದು’ ಎಂಬ ಈ ಯೋಜನೆಯು ಬೂತ್ ಮಟ್ಟದ ಅಧಿಕಾರಿಗಳಿಗೆ ತರಬೇತಿ ನೀಡುವುದರೊಂದಿಗೆ ಸವಾಲಿನ ಭೌಗೋಳಿಕ ಪ್ರದೇಶಗಳಲ್ಲಿ ಪ್ರಜಾಪ್ರಭುತ್ವದಲ್ಲಿ ಭಾಗವಹಿಸುವಿಕೆಯನ್ನು ಬಲಪಡಿಸುವ ಗುರಿಯನ್ನು ಹೊಂದಿದೆ’ ಎಂದು ಅವರು ಹೇಳಿದರು.</p>.<p>ಈ ಸಂಘಟಿತ ಪ್ರಯತ್ನವು, ಭೌಗೋಳಿಕ ಸ್ಥಳವನ್ನು ಲೆಕ್ಕಿಸದೆ, ಎಲ್ಲಾ ನಾಗರಿಕರಿಗೂ ಸಮಗ್ರ ಮತ್ತು ಪ್ರವೇಶಿಸಬಹುದಾದ ಚುನಾವಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳುವ ಇಸಿಐನ ಬದ್ಧತೆಯನ್ನು ಒತ್ತಿಹೇಳುತ್ತದೆ ಎಂದು ವಿವರಿಸಿದರು.</p>.<p>ಕಾರುಗುಂದ ಮತ್ತು ಕುಂದಚೇರಿ ಹಾಗೂ ಕೋಪಟ್ಟಿ ಮತಗಟ್ಟೆಗಳಿಗೆ ಭೇಟಿ ನೀಡಿ ಸೌಲಭ್ಯಗಳ ಬಗ್ಗೆ ಪರಿಶೀಲಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>