<p><strong>ಶನಿವಾರಸಂತೆ:</strong> ನಿಡ್ತ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಂಗಳವಾರ ಸಂಜೆ ಸುರಿದ ಭಾರಿ ಮಳೆಗೆ ವಿದ್ಯುತ್ ಕಂಬಗಳು, ಮರಗಳು ಉರುಳಿ ಬಿದ್ದಿವೆ.</p>.<p>ನಿಡ್ತ ಸರ್ಕಾರಿ ಶಾಲೆ ಬಳಿಯ ಹಾರೆಹೊಸೂರು ರಸ್ತೆ ಬದಿಯಲ್ಲಿ ಭಾರಿ ಗಾತ್ರದ ಮರದ ಕೊಂಬೆ ವಿದ್ಯುತ್ ತಂತಿಯ ಮೇಲೆ ಮುರಿದು ಬಿದ್ದು, ವಿದ್ಯುತ್ ಕಂಬ ಮುರಿದಿದೆ. ಇದರಿಂದ ನಿಡ್ತ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಂಡಿತು.</p>.<p>ಮಾಹಿತಿ ತಿಳಿದ ಸೆಸ್ಕ್ ಸಿಬ್ಬಂದಿ ಸ್ಥಳಕ್ಕೆ ಬಂದು ರಸ್ತೆಗೆ ಅಡ್ಡಲಾಗಿ ಬಿದ್ದ ವಿದ್ಯುತ್ ಕಂಬ, ಮರದ ಕೊಂಬೆಯನ್ನು ತೆರವುಗೊಳಿಸಿದರು.</p>.<p>ಬುಧವಾರ ಬೆಳಿಗ್ಗೆ ನಿಡ್ತ ವ್ಯಾಪ್ತಿಯಲ್ಲಿ ಧಾರಕಾರವಾಗಿ ಮಳೆಯಾಗಿದೆ. ನಿಡ್ತ ಸಮಿಪದ ಕಾರ್ಗೊಡು ಬಳಿ ಶನಿವಾರಸಂತೆ ರಸ್ತೆ ಬದಿಯಲ್ಲಿ ಭಾರಿ ಗಾತ್ರದ ಮರವೊಂದು ಬೀಳುವ ಸ್ಥಿತಿಯಲ್ಲಿತ್ತು. ಇದೆ ವೇಳೆಯಲ್ಲಿ ವಾಹನ ಸವಾರರು ಮರ ನೆಲಕ್ಕೆ ವಾಲುತ್ತಿರುವುದನ್ನು ಗಮನಿಸಿ ವಾಹನಗಳನ್ನು ಅಲ್ಲಿ ನಿಲ್ಲಸಿಕೊಂಡರು. ಈ ಕುರಿತು ಸ್ಥಳೀಯರು ಗ್ರಾಮ ಪಂಚಾಯಿತಿಗೆ ಮಾಹಿತಿ ನೀಡಿದ ಮೇರೆಗೆ ವಿಪತ್ತು ನಿರ್ವಹಣಾ ಸಿಬ್ಬಂದಿ ಸ್ಥಳಕ್ಕೆ ಬಂದು ಬೀಳುವ ಹಂತದಲ್ಲಿದ್ದ ಮರವನ್ನು ತೆರವುಗೊಳಿಸುವ ಮೂಲಕ ಅನಾಹುತ ತಪ್ಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶನಿವಾರಸಂತೆ:</strong> ನಿಡ್ತ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಂಗಳವಾರ ಸಂಜೆ ಸುರಿದ ಭಾರಿ ಮಳೆಗೆ ವಿದ್ಯುತ್ ಕಂಬಗಳು, ಮರಗಳು ಉರುಳಿ ಬಿದ್ದಿವೆ.</p>.<p>ನಿಡ್ತ ಸರ್ಕಾರಿ ಶಾಲೆ ಬಳಿಯ ಹಾರೆಹೊಸೂರು ರಸ್ತೆ ಬದಿಯಲ್ಲಿ ಭಾರಿ ಗಾತ್ರದ ಮರದ ಕೊಂಬೆ ವಿದ್ಯುತ್ ತಂತಿಯ ಮೇಲೆ ಮುರಿದು ಬಿದ್ದು, ವಿದ್ಯುತ್ ಕಂಬ ಮುರಿದಿದೆ. ಇದರಿಂದ ನಿಡ್ತ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಂಡಿತು.</p>.<p>ಮಾಹಿತಿ ತಿಳಿದ ಸೆಸ್ಕ್ ಸಿಬ್ಬಂದಿ ಸ್ಥಳಕ್ಕೆ ಬಂದು ರಸ್ತೆಗೆ ಅಡ್ಡಲಾಗಿ ಬಿದ್ದ ವಿದ್ಯುತ್ ಕಂಬ, ಮರದ ಕೊಂಬೆಯನ್ನು ತೆರವುಗೊಳಿಸಿದರು.</p>.<p>ಬುಧವಾರ ಬೆಳಿಗ್ಗೆ ನಿಡ್ತ ವ್ಯಾಪ್ತಿಯಲ್ಲಿ ಧಾರಕಾರವಾಗಿ ಮಳೆಯಾಗಿದೆ. ನಿಡ್ತ ಸಮಿಪದ ಕಾರ್ಗೊಡು ಬಳಿ ಶನಿವಾರಸಂತೆ ರಸ್ತೆ ಬದಿಯಲ್ಲಿ ಭಾರಿ ಗಾತ್ರದ ಮರವೊಂದು ಬೀಳುವ ಸ್ಥಿತಿಯಲ್ಲಿತ್ತು. ಇದೆ ವೇಳೆಯಲ್ಲಿ ವಾಹನ ಸವಾರರು ಮರ ನೆಲಕ್ಕೆ ವಾಲುತ್ತಿರುವುದನ್ನು ಗಮನಿಸಿ ವಾಹನಗಳನ್ನು ಅಲ್ಲಿ ನಿಲ್ಲಸಿಕೊಂಡರು. ಈ ಕುರಿತು ಸ್ಥಳೀಯರು ಗ್ರಾಮ ಪಂಚಾಯಿತಿಗೆ ಮಾಹಿತಿ ನೀಡಿದ ಮೇರೆಗೆ ವಿಪತ್ತು ನಿರ್ವಹಣಾ ಸಿಬ್ಬಂದಿ ಸ್ಥಳಕ್ಕೆ ಬಂದು ಬೀಳುವ ಹಂತದಲ್ಲಿದ್ದ ಮರವನ್ನು ತೆರವುಗೊಳಿಸುವ ಮೂಲಕ ಅನಾಹುತ ತಪ್ಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>