<p><strong>ಸಿದ್ದಾಪುರ</strong>: ಮನೆಯ ಸಮೀಪದಲ್ಲಿ ನಿಲ್ಲಿಸಿದ್ದ ಆಟೋ ರಿಕ್ಷಾ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ಸಿದ್ದಾಪುರ ಸಮೀಪದ ಬಾಡಗ ಬಾಣಂಗಾಲದಲ್ಲಿ ನಡೆದಿದೆ.</p>.<p>ಇಲ್ಲಿನ ಆಟೋ ಚಾಲಕ ವಿಜಯ್ ಎಂಬುವರು ಎಂದಿನಂತೆ ಮನೆ ಬಳಿ ಆಟೋ ರಿಕ್ಷಾ ನಿಲ್ಲಿಸಿ ಹೊರಗೆ ತೆರಳಿದ್ದರು. ರಾತ್ರಿಯ ವೇಳೆ ನಾಯಿ ಅಟ್ಟಿಸಿಕೊಂಡು ಬಂದ ಕಾಡಾನೆ ಮನೆ ಸಮೀಪದಲ್ಲಿದ್ದ ರಿಕ್ಷಾ ಮೇಲೆ ದಾಳಿ ನಡೆಸಿದೆ.</p><p>ಪರಿಣಾಮ ವಾಹನದ ಹಿಂಭಾಗಕ್ಕೆ ಹಾನಿಯಾಗಿದೆ. ಕಾಡಾನೆಗಳು ಕಾಫಿ ತೂಟದಲ್ಲಿ ಬೀಡುಬಿಟ್ಟಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಕಾಡಿಗೆ ಅಟ್ಟಬೇಕೆಂದು ಸ್ಥಳೀಯರು ಒತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿದ್ದಾಪುರ</strong>: ಮನೆಯ ಸಮೀಪದಲ್ಲಿ ನಿಲ್ಲಿಸಿದ್ದ ಆಟೋ ರಿಕ್ಷಾ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ಸಿದ್ದಾಪುರ ಸಮೀಪದ ಬಾಡಗ ಬಾಣಂಗಾಲದಲ್ಲಿ ನಡೆದಿದೆ.</p>.<p>ಇಲ್ಲಿನ ಆಟೋ ಚಾಲಕ ವಿಜಯ್ ಎಂಬುವರು ಎಂದಿನಂತೆ ಮನೆ ಬಳಿ ಆಟೋ ರಿಕ್ಷಾ ನಿಲ್ಲಿಸಿ ಹೊರಗೆ ತೆರಳಿದ್ದರು. ರಾತ್ರಿಯ ವೇಳೆ ನಾಯಿ ಅಟ್ಟಿಸಿಕೊಂಡು ಬಂದ ಕಾಡಾನೆ ಮನೆ ಸಮೀಪದಲ್ಲಿದ್ದ ರಿಕ್ಷಾ ಮೇಲೆ ದಾಳಿ ನಡೆಸಿದೆ.</p><p>ಪರಿಣಾಮ ವಾಹನದ ಹಿಂಭಾಗಕ್ಕೆ ಹಾನಿಯಾಗಿದೆ. ಕಾಡಾನೆಗಳು ಕಾಫಿ ತೂಟದಲ್ಲಿ ಬೀಡುಬಿಟ್ಟಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಕಾಡಿಗೆ ಅಟ್ಟಬೇಕೆಂದು ಸ್ಥಳೀಯರು ಒತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>