ಇಲ್ಲಿನ ಆಟೋ ಚಾಲಕ ವಿಜಯ್ ಎಂಬುವರು ಎಂದಿನಂತೆ ಮನೆ ಬಳಿ ಆಟೋ ರಿಕ್ಷಾ ನಿಲ್ಲಿಸಿ ಹೊರಗೆ ತೆರಳಿದ್ದರು. ರಾತ್ರಿಯ ವೇಳೆ ನಾಯಿ ಅಟ್ಟಿಸಿಕೊಂಡು ಬಂದ ಕಾಡಾನೆ ಮನೆ ಸಮೀಪದಲ್ಲಿದ್ದ ರಿಕ್ಷಾ ಮೇಲೆ ದಾಳಿ ನಡೆಸಿದೆ.
ಪರಿಣಾಮ ವಾಹನದ ಹಿಂಭಾಗಕ್ಕೆ ಹಾನಿಯಾಗಿದೆ. ಕಾಡಾನೆಗಳು ಕಾಫಿ ತೂಟದಲ್ಲಿ ಬೀಡುಬಿಟ್ಟಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಕಾಡಿಗೆ ಅಟ್ಟಬೇಕೆಂದು ಸ್ಥಳೀಯರು ಒತಾಯಿಸಿದ್ದಾರೆ.