ಸ್ಥಳಕ್ಕೆ ಬಂದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ಕುಮಾರ್ ತ್ರಿಪಾಠಿ ಸ್ಥಳೀಯರ ಮನವೊಲಿಸುವ ಪ್ರಯತ್ನ ಮಾಡಿದರು. ಪರಿಹಾರ ಹೆಚ್ಚಿಸುವ ಕುರಿತು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು, ಕಾಡಾನೆಗಳನ್ನು ಕಾಡಿಗೆ ಓಡಿಸಲಾಗುವುದು, ಮತ್ತೆ ಮತ್ತೆ ಬರುವ ಕಾಡಾನೆಯನ್ನು ಸೆರೆ ಹಿಡಿಯಲು ಪ್ರಸ್ತಾವ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ವಾಪಸ್ ಪಡೆಯಲಾಯಿತು.