ಮಡಿಕೇರಿ: ಪೊನ್ನಂಪೇಟೆ ತಾಲ್ಲೂಕಿನ ಕೋಣನಕಟ್ಟೆ- ಮರಪಾಲ ತಿತಿಮತಿ ರಸ್ತೆಯಲ್ಲಿ ಶನಿವಾರ ಬೆಳಿಗ್ಗೆ ಬೈಕ್ ನಲ್ಲಿ ತೆರಳುತ್ತಿದ್ದ ಮೂವರ ಮೇಲೆ ಕಾಡಾನೆಯೊಂದು ದಾಳಿ ನಡೆಸಿದೆ. ಮಾರಿಯಮ್ಮ ಕಾಲೋನಿಯ ಚಾಮಣ್ಣ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ಬೆಳಿಗ್ಗೆ 7 ಗಂಟೆಗೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶ್ರೀಮಂಗಲ ಸಮೀಪದ ಬೀರುಗದಲ್ಲಿ ಶುಕ್ರವಾರ ಕಾಡಾನೆ ದಾಳಿಗೆ ಹಾಲಪ್ಪ ಎಂಬುವವರು ತೀವ್ರವಾಗಿ ಗಾಯಗೊಂಡಿದ್ದರು.