<p><strong>ಸುಂಟಿಕೊಪ್ಪ:</strong> ಹೋಬಳಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಕಾಡಾನೆಗಳು ಮತ್ತೆ ಕಾಣಿಸಿಕೊಂಡಿದ್ದು, ಆಗಾಗ್ಗೆ ದಾಂಧಲೆ ನಡೆಸಿ ಫಸಲು ಭರಿತ ಬೆಳೆಗಳನ್ನು ತುಳಿದು ತಿಂದು ನಷ್ಟವುಂಟುಮಾಡುತ್ತಿವೆ.</p>.<p>ಸಮೀಪದ ಅತ್ತೂರು ನಲ್ಲೂರು ಗ್ರಾಮದ ಕಡ್ಲೆಮನೆ ರಘುಕುಮಾರ ಎಂಬುವವರ ಮನೆಯ ಸಮೀಪದಲ್ಲಿರುವ ತೋಟಕ್ಕೆ ಆಹಾರ ಅರಸಿ ಬಂದ ಕಾಡಾನೆಗಳ ಹಿಂಡು ಕೃಷಿ ಫಸಲುಗಳನ್ನು ತಿಂದು ಧ್ವಂಸಗೊಳಿಸಿವೆ. ತೋಟದಲ್ಲಿ ಬೆಳೆಸಲಾದ ಬಾಳೆಗಿಡಗಳನ್ನು ಸಂಪೂರ್ಣ ತಿಂದು ನಾಶಪಡಿಸಿವೆ.</p>.<p>ಕಾಡಾನೆಗಳ ಹಿಂಡು ಈ ಭಾಗದಲ್ಲಿಯೇ ತೋಟಗಳಲ್ಲಿಯೇ ಬೀಡು ಬಿಟ್ಟಿದ್ದು. ಈ ಭಾಗದ ಬಹುತೇಕ ತೋಟಗಳಲ್ಲಿ ದಾಳಿ ನಡೆಸುವ ಮೂಲಕ ಕೃಷಿ ಫಸಲುಗಳನ್ನು ದ್ಚಂಸಗೊಳಿಸುತ್ತಿವೆ. ಈ ಭಾಗದಲ್ಲಿ ಅರಣ್ಯ ಇಲಾಖೆಯವರು ಕಾಡಾನೆಗಳನ್ನು ಆಗಿಂದಾಗ್ಗೆ ಕಾಡಿಗೆ ಅಟ್ಟುವ ಕಾರ್ಯಾಚರಣೆ ಮಾಡಿದರೂ ಮರುದಿನ ಮತ್ತೆ ಅದೇ ಸ್ಥಳಗಳಲ್ಲಿ ಪ್ರತ್ಯಕ್ಷವಾಗಿ ಮತ್ತಷ್ಟು ದಾಂಧಲೇ ನೆಡೆಸುತ್ತಿದೆ ಎಂದು ರಘುಕುಮಾರ್ ಆಳಲನ್ನು ತೋಡಿಕೊಂಡಿದ್ದಾರೆ.</p>.<p>ಈ ಬಗ್ಗೆ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು. ಕಾಡಾನೆಗಳನ್ನು ಕಾಡಿಗೆ ಅಟ್ಟುವುದರೊಂದಿಗೆ ಶಾಶ್ವತ ಪರಿಹಾರಕ್ಕೆ ಚಿಂತನೆ ನಡೆಸುವಂತಾಗಬೇಕೆಂದು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.</p>.<p>ಸಮೀಪದ ಭೂತನಕಾಡು ರಸ್ತೆಯಲ್ಲಿ ಮಂಗಳವಾರ ರಾತ್ರಿ 8 ಗಂಟೆಯ ಸುಮಾರಿಯಲ್ಲಿ ಕಾಡಾನೆಯೊಂದು ನಿಂತು ಕೆಲ ಕಾಲ ವಾಹನ ಸಂಚಾರಕ್ಕೆ ಅಡ್ಡಿ ಪಡೆಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಂಟಿಕೊಪ್ಪ:</strong> ಹೋಬಳಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಕಾಡಾನೆಗಳು ಮತ್ತೆ ಕಾಣಿಸಿಕೊಂಡಿದ್ದು, ಆಗಾಗ್ಗೆ ದಾಂಧಲೆ ನಡೆಸಿ ಫಸಲು ಭರಿತ ಬೆಳೆಗಳನ್ನು ತುಳಿದು ತಿಂದು ನಷ್ಟವುಂಟುಮಾಡುತ್ತಿವೆ.</p>.<p>ಸಮೀಪದ ಅತ್ತೂರು ನಲ್ಲೂರು ಗ್ರಾಮದ ಕಡ್ಲೆಮನೆ ರಘುಕುಮಾರ ಎಂಬುವವರ ಮನೆಯ ಸಮೀಪದಲ್ಲಿರುವ ತೋಟಕ್ಕೆ ಆಹಾರ ಅರಸಿ ಬಂದ ಕಾಡಾನೆಗಳ ಹಿಂಡು ಕೃಷಿ ಫಸಲುಗಳನ್ನು ತಿಂದು ಧ್ವಂಸಗೊಳಿಸಿವೆ. ತೋಟದಲ್ಲಿ ಬೆಳೆಸಲಾದ ಬಾಳೆಗಿಡಗಳನ್ನು ಸಂಪೂರ್ಣ ತಿಂದು ನಾಶಪಡಿಸಿವೆ.</p>.<p>ಕಾಡಾನೆಗಳ ಹಿಂಡು ಈ ಭಾಗದಲ್ಲಿಯೇ ತೋಟಗಳಲ್ಲಿಯೇ ಬೀಡು ಬಿಟ್ಟಿದ್ದು. ಈ ಭಾಗದ ಬಹುತೇಕ ತೋಟಗಳಲ್ಲಿ ದಾಳಿ ನಡೆಸುವ ಮೂಲಕ ಕೃಷಿ ಫಸಲುಗಳನ್ನು ದ್ಚಂಸಗೊಳಿಸುತ್ತಿವೆ. ಈ ಭಾಗದಲ್ಲಿ ಅರಣ್ಯ ಇಲಾಖೆಯವರು ಕಾಡಾನೆಗಳನ್ನು ಆಗಿಂದಾಗ್ಗೆ ಕಾಡಿಗೆ ಅಟ್ಟುವ ಕಾರ್ಯಾಚರಣೆ ಮಾಡಿದರೂ ಮರುದಿನ ಮತ್ತೆ ಅದೇ ಸ್ಥಳಗಳಲ್ಲಿ ಪ್ರತ್ಯಕ್ಷವಾಗಿ ಮತ್ತಷ್ಟು ದಾಂಧಲೇ ನೆಡೆಸುತ್ತಿದೆ ಎಂದು ರಘುಕುಮಾರ್ ಆಳಲನ್ನು ತೋಡಿಕೊಂಡಿದ್ದಾರೆ.</p>.<p>ಈ ಬಗ್ಗೆ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು. ಕಾಡಾನೆಗಳನ್ನು ಕಾಡಿಗೆ ಅಟ್ಟುವುದರೊಂದಿಗೆ ಶಾಶ್ವತ ಪರಿಹಾರಕ್ಕೆ ಚಿಂತನೆ ನಡೆಸುವಂತಾಗಬೇಕೆಂದು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.</p>.<p>ಸಮೀಪದ ಭೂತನಕಾಡು ರಸ್ತೆಯಲ್ಲಿ ಮಂಗಳವಾರ ರಾತ್ರಿ 8 ಗಂಟೆಯ ಸುಮಾರಿಯಲ್ಲಿ ಕಾಡಾನೆಯೊಂದು ನಿಂತು ಕೆಲ ಕಾಲ ವಾಹನ ಸಂಚಾರಕ್ಕೆ ಅಡ್ಡಿ ಪಡೆಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>