<p><strong>ಸಿದ್ದಾಪುರ:</strong> ಕಾಡಾನೆ ದಾಳಿಯಿಂದ ಪಾಲಿಬೆಟ್ಟ ವ್ಯಾಪ್ತಿಯಲ್ಲಿ ಕಾರ್ಮಿಕ ಮೃತಪಟ್ಟ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಮಂಗಳವಾರ ಕಾಡಾನೆ ಕಾರ್ಯಾಚರಣೆ ಕೈಗೊಂಡಿದ್ದು, ತೋಟದಲ್ಲಿ 9 ಕಾಡಾನೆಗಳು ಕಾಣಿಸಿಕೊಂಡವು.</p>.<p>ಪಾಲಿಬೆಟ್ಟ, ಎಮ್ಮೆಗುಂಡಿ ಸುತ್ತಮುತ್ತಲಿನ ತೋಟಗಳಲ್ಲಿ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಕಾಡಾನೆ ಹಿಂಡು ಅರಣ್ಯದ ಕಡೆಗೆ ಅಟ್ಟಲು ಯತ್ನಿಸಿದ್ದಾರೆ.</p>.<p>‘ಕಾಡಾನೆಗಳ ಹಿಂಡು ಬೇರ್ಪಟ್ಟಿದ್ದು, ಪಟಾಕಿ ಸಿಡಿಸಿ 9 ಕಾಡಾನೆಗಳನ್ನು ದೇವಮಚ್ಚಿ ಅರಣ್ಯಕ್ಕೆ ಅಟ್ಟಲಾಯಿತು. ರಾತ್ರಿ ವೇಳೆಯಲ್ಲಿ ಕಾಡಾನೆಗಳು ಮರಳಿ ತೋಟಕ್ಕೆ ಬರುತ್ತಿದ್ದು, ರಾತ್ರಿ ಕೂಡ ಆನೆಗಳ ಚಲನವಲನ ಕಂಡು ಹಿಡಿಯಲು ಸಿಬ್ಬಂದಿ ನೇಮಿಸಲಾಗಿದೆ’ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಕಾರ್ಯಾಚರಣೆಯಲ್ಲಿ ತಿತಿಮತಿ ವಲಯ ಅರಣ್ಯಾಧಿಕಾರಿ ಗಂಗಾಧರ್, ವಿರಾಜಪೇಟೆ ವಲಯ ಅರಣ್ಯಾಧಿಕಾರಿ ಶಿವರಾಮ್, ಉಪವಲಯ ಅರಣ್ಯಾಧಿಕಾರಿ ಶಶಿ, ದೇವರಾಜ್, ಆರ್ಆರ್ಟಿ ಹಾಗೂ ಆನೆ ಕಾರ್ಯಪಡೆ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿದ್ದಾಪುರ:</strong> ಕಾಡಾನೆ ದಾಳಿಯಿಂದ ಪಾಲಿಬೆಟ್ಟ ವ್ಯಾಪ್ತಿಯಲ್ಲಿ ಕಾರ್ಮಿಕ ಮೃತಪಟ್ಟ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಮಂಗಳವಾರ ಕಾಡಾನೆ ಕಾರ್ಯಾಚರಣೆ ಕೈಗೊಂಡಿದ್ದು, ತೋಟದಲ್ಲಿ 9 ಕಾಡಾನೆಗಳು ಕಾಣಿಸಿಕೊಂಡವು.</p>.<p>ಪಾಲಿಬೆಟ್ಟ, ಎಮ್ಮೆಗುಂಡಿ ಸುತ್ತಮುತ್ತಲಿನ ತೋಟಗಳಲ್ಲಿ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಕಾಡಾನೆ ಹಿಂಡು ಅರಣ್ಯದ ಕಡೆಗೆ ಅಟ್ಟಲು ಯತ್ನಿಸಿದ್ದಾರೆ.</p>.<p>‘ಕಾಡಾನೆಗಳ ಹಿಂಡು ಬೇರ್ಪಟ್ಟಿದ್ದು, ಪಟಾಕಿ ಸಿಡಿಸಿ 9 ಕಾಡಾನೆಗಳನ್ನು ದೇವಮಚ್ಚಿ ಅರಣ್ಯಕ್ಕೆ ಅಟ್ಟಲಾಯಿತು. ರಾತ್ರಿ ವೇಳೆಯಲ್ಲಿ ಕಾಡಾನೆಗಳು ಮರಳಿ ತೋಟಕ್ಕೆ ಬರುತ್ತಿದ್ದು, ರಾತ್ರಿ ಕೂಡ ಆನೆಗಳ ಚಲನವಲನ ಕಂಡು ಹಿಡಿಯಲು ಸಿಬ್ಬಂದಿ ನೇಮಿಸಲಾಗಿದೆ’ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಕಾರ್ಯಾಚರಣೆಯಲ್ಲಿ ತಿತಿಮತಿ ವಲಯ ಅರಣ್ಯಾಧಿಕಾರಿ ಗಂಗಾಧರ್, ವಿರಾಜಪೇಟೆ ವಲಯ ಅರಣ್ಯಾಧಿಕಾರಿ ಶಿವರಾಮ್, ಉಪವಲಯ ಅರಣ್ಯಾಧಿಕಾರಿ ಶಶಿ, ದೇವರಾಜ್, ಆರ್ಆರ್ಟಿ ಹಾಗೂ ಆನೆ ಕಾರ್ಯಪಡೆ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>