<p><strong>ನಾಪೋಕ್ಲು</strong>: ಕಾಡಾನೆ ಹಾವಳಿಯಿಂದ ಬೇಸತ್ತ ನರಿಯಂಡಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳ ಗ್ರಾಮಸ್ಥರು ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಇದೇ 10ಕ್ಕೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.</p>.<p>ಕಾಡಾನೆ ಉಪಟಳದಿಂದ ಪಂಚಾಯತಿ ವ್ಯಾಪ್ತಿಯ ಚೆಯ್ಯಂಡಾಣೆ, ಚೇಲಾವರ, ಕೋಕೇರಿ, ಪಾಲಂಗಾಲ ಗ್ರಾಮಗಳಲ್ಲಿ ಕಾಡಾನೆ ಹಾವಳಿ ನಿರಂತರವಾಗಿದ್ದು ಕೃಷಿಕರ ಫಸಲು ನಷ್ಟವಾಗುತ್ತಿವೆ.</p>.<p>ಇದೇ ಗ್ರಾಮದ ಪೊಕ್ಕೋಳಂಡ್ರ ಧನೋಜ್ ಅವರ ತೋಟಕ್ಕೆ ನುಗ್ಗಿರುವ ಕಾಡಾನೆಗಳ ಹಿಂಡು ಕೃಷಿ ಪಸಲು ತಿಂದು ಧ್ವಂಸಗೊಳಿಸಿವೆ. ಪದೇಪದೇ ದಾಂದಲೆ ನಡೆಸಿ ಫಸಲು ತುಳಿದು ತಿಂದು ನಷ್ಟ ಉಂಟು ಮಾಡುತ್ತಿವೆ. ನಿರಂತರ ಉಪಟಳದಿಂದ ಬೇಸತ್ತ ಗ್ರಾಮಸ್ಥರು ಚೆಯ್ಯಂಡಾಣೆಯಲ್ಲಿ ರಸ್ತೆ ತಡೆ ನಡೆಸಲಿದ್ದಾರೆ. </p>.<p>ಬೆಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಡಿಎಫ್ಒ ಜಗನ್ನಾಥ್ ಕಾಡಾನೆಗಳ ದಾಂದಲೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಪ್ರತಿಭಟನೆ ಕೈ ಬಿಟ್ಟು ಸಹಕರಿಸಬೇಕು ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಪೋಕ್ಲು</strong>: ಕಾಡಾನೆ ಹಾವಳಿಯಿಂದ ಬೇಸತ್ತ ನರಿಯಂಡಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳ ಗ್ರಾಮಸ್ಥರು ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಇದೇ 10ಕ್ಕೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.</p>.<p>ಕಾಡಾನೆ ಉಪಟಳದಿಂದ ಪಂಚಾಯತಿ ವ್ಯಾಪ್ತಿಯ ಚೆಯ್ಯಂಡಾಣೆ, ಚೇಲಾವರ, ಕೋಕೇರಿ, ಪಾಲಂಗಾಲ ಗ್ರಾಮಗಳಲ್ಲಿ ಕಾಡಾನೆ ಹಾವಳಿ ನಿರಂತರವಾಗಿದ್ದು ಕೃಷಿಕರ ಫಸಲು ನಷ್ಟವಾಗುತ್ತಿವೆ.</p>.<p>ಇದೇ ಗ್ರಾಮದ ಪೊಕ್ಕೋಳಂಡ್ರ ಧನೋಜ್ ಅವರ ತೋಟಕ್ಕೆ ನುಗ್ಗಿರುವ ಕಾಡಾನೆಗಳ ಹಿಂಡು ಕೃಷಿ ಪಸಲು ತಿಂದು ಧ್ವಂಸಗೊಳಿಸಿವೆ. ಪದೇಪದೇ ದಾಂದಲೆ ನಡೆಸಿ ಫಸಲು ತುಳಿದು ತಿಂದು ನಷ್ಟ ಉಂಟು ಮಾಡುತ್ತಿವೆ. ನಿರಂತರ ಉಪಟಳದಿಂದ ಬೇಸತ್ತ ಗ್ರಾಮಸ್ಥರು ಚೆಯ್ಯಂಡಾಣೆಯಲ್ಲಿ ರಸ್ತೆ ತಡೆ ನಡೆಸಲಿದ್ದಾರೆ. </p>.<p>ಬೆಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಡಿಎಫ್ಒ ಜಗನ್ನಾಥ್ ಕಾಡಾನೆಗಳ ದಾಂದಲೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಪ್ರತಿಭಟನೆ ಕೈ ಬಿಟ್ಟು ಸಹಕರಿಸಬೇಕು ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>