ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಡಾನೆ ದಾಳಿ: ಕಾರ್ಮಿಕ ಬಲಿ

Last Updated 30 ಆಗಸ್ಟ್ 2021, 15:24 IST
ಅಕ್ಷರ ಗಾತ್ರ

ಸಿದ್ದಾಪುರ: ಮಾಲ್ದಾರೆ ಗ್ರಾಮ ಪಂಚಾಯಿತಿಯ ಘಟ್ಟದಳ ಎಂಬಲ್ಲಿ ಭಾನುವಾರ ರಾತ್ರಿ ಕಾಡಾನೆ ದಾಳಿ ನಡೆಸಿದ ಪರಿಣಾಮ ಕಾರ್ಮಿಕಕರಿಯ (53) ಸ್ಥಳದಲ್ಲೇ ಸಾವನ್ನಪ್ಪಿದರು.

ಇಲ್ಲಿನ ಕೀತಿಯಂಡ ಅಪ್ಪಚ್ಚು ಅವರ ಎಸ್ಟೇಟ್‌‌ನಲ್ಲಿ ಕೆಲಸ ಮಾಡುತ್ತಿದ್ದ ಅವರು ರಾತ್ರಿ 10.30ರಲ್ಲಿ ಸಮೀಪದ ಅಂಗಡಿಯಿಂದ ಮನೆಗೆ ತೆರಳುತ್ತಿದ್ದಾಗ ಕಾಡಾನೆ ಏಕಾಏಕಿ ದಾಳಿ ನಡೆಸಿತ್ತು. ಅರಣ್ಯ ಇಲಾಖೆಯಿಂದ ₹2 ಲಕ್ಷ ಪರಿಹಾರವನ್ನು ಅವರ ಕುಟುಂಬದವರಿಗೆ ನೀಡಲಾಗಿದೆ.

ನೆಚೌಕೂರು ವನ್ಯಜೀವಿ ಸಂರಕ್ಷಣಾ ವಲಯದ ಎ.ಸಿ.ಎಫ್ ಸತೀಶ್, ಆರ್.ಎಫ್.ಓ ಕಿರಣ್ ಕುಮಾರ್, ಡಿ.ಸಿ.ಎಫ್ ಮಹೇಶ್ ಕುಮಾರ್, ಸಿದ್ದಾಪುರ ಠಾಣಾಧಿಕಾರಿ ಮೋಹನ್ ರಾಜ್ ಭೇಟಿ ನೀಡಿದ್ದರು.

ಮಾಲ್ದಾರೆ, ಘಟ್ಟದಳ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಆನೆ ಹಿಂಡು ದಾಂಧಲೆ ನಡೆಸುತ್ತಿವೆ. ಫಸಲನ್ನು ನಾಶ ಪಡಿಸುತ್ತಿದ್ದು, ಕೆಲಸ ಮಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಡಾನೆಗಳನ್ನು ಕೂಡಲೇ ಕಾಡಿಗೆ ಅಟ್ಟಬೇಕೆಂದು ಕೀತಿಯಂಡ ಅಪ್ಪಚ್ಚು ಒತ್ತಾಯಿಸಿದ್ದಾರೆ‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT