ಸೋಮವಾರಪೇಟೆ: ಸಮೀಪದ ನೇರುಗಳಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಯೂರು-ನೇಗಳ್ಳೆ ಗ್ರಾಮದಲ್ಲಿ ಶನಿವಾರ ರಾತ್ರಿ ಸೋಲಾರ್ ತಂತಿಗೆ ಸಿಲುಕಿ ಕಾಡಾನೆ ಮರಿ ಮೃತಪಟ್ಟಿದೆ.
ಪೂವಯ್ಯ ಎಂಬುವವರ ತೋಟದಲ್ಲಿ ಕಾಡಾನೆ ಕಳೇಬರ ಪತ್ತೆಯಾಗಿದೆ.
ನೇಗಳ್ಳೆ ಅವಿನಾಶ್ ಎಂಬುವವರು ಪೂವಯ್ಯ ಅವರ ಜಾಗದಲ್ಲಿ ಶುಂಠಿ ಕೃಷಿ ಮಾಡಿದ್ದರು. ಕಾಡಾನೆಗಳ ಹಾವಳಿ ತಪ್ಪಿಸಲು ಸ್ವಂತವಾಗಿ ಸೋಲಾರ್ ತಂತಿ ಬೇಲಿ ಅಳವಡಿಸಿದ್ದರು. ಯಡವನಾಡು ಮೀಸಲು ಅರಣ್ಯದಿಂದ ಕಾಡಾನೆ ಹಿಂಡು, ತಂತಿ ದಾಟುವ ವೇಳೆ ಮರಿಯ ಸೊಂಡಲಿಗೆ ತಂತಿ ತಾಗಿದೆ ಎಂಬುದು ಗೊತ್ತಾಗಿದೆ.