<p><strong>ಸಿದ್ದಾಪುರ (ಕೊಡಗು):</strong> ಇಲ್ಲಿನ ವಾಲ್ನೂರು ತ್ಯಾಗತ್ತೂರು ಗ್ರಾ.ಪಂ ವ್ಯಾಪ್ತಿಯ ಕಾಫಿ ತೋಟವೊಂದರಲ್ಲಿ ಗುರುವಾರ ಕುಸಿದುಬಿದ್ದಿದ್ದ ಹೆಣ್ಣು ಕಾಡಾನೆಯು, ಶನಿವಾರ ಮೃತಪಟ್ಟಿದೆ.</p>.<p>ತೀವ್ರ ಅಸ್ವಸ್ಥಗೊಂಡಿದ್ದ ಈ ಆನೆಗೆ, ಎರಡು ದಿನಗಳಿಂದ ವನ್ಯಜೀವಿ ವೈದ್ಯಾಧಿಕಾರಿ ಡಾ. ಮುಜೀಬ್ ಚಿಕಿತ್ಸೆ ನೀಡುತ್ತಿದ್ದರು. ನಿತ್ರಾಣಗೊಂಡಿದ್ದ ಅದನ್ನು, ದುಬಾರೆ ಶಿಬಿರದ ಸಾಕಾನೆಗಳ ನೆರವಿನಿಂದ ಎಬ್ಬಿಸಿ ನಿಲ್ಲಿಸುವ ಪ್ರಯತ್ನವನ್ನೂ ಅರಣ್ಯ ಇಲಾಖೆ ಸಿಬ್ಬಂದಿ ಮಾಡಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿತು.</p>.<p>ಮರಣೋತ್ತರ ಪರೀಕ್ಷೆ ಬಳಿಕ, ಕಾಡಾನೆಯ ಕಳೇಬರವನ್ನು ಹೂಳಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿದ್ದಾಪುರ (ಕೊಡಗು):</strong> ಇಲ್ಲಿನ ವಾಲ್ನೂರು ತ್ಯಾಗತ್ತೂರು ಗ್ರಾ.ಪಂ ವ್ಯಾಪ್ತಿಯ ಕಾಫಿ ತೋಟವೊಂದರಲ್ಲಿ ಗುರುವಾರ ಕುಸಿದುಬಿದ್ದಿದ್ದ ಹೆಣ್ಣು ಕಾಡಾನೆಯು, ಶನಿವಾರ ಮೃತಪಟ್ಟಿದೆ.</p>.<p>ತೀವ್ರ ಅಸ್ವಸ್ಥಗೊಂಡಿದ್ದ ಈ ಆನೆಗೆ, ಎರಡು ದಿನಗಳಿಂದ ವನ್ಯಜೀವಿ ವೈದ್ಯಾಧಿಕಾರಿ ಡಾ. ಮುಜೀಬ್ ಚಿಕಿತ್ಸೆ ನೀಡುತ್ತಿದ್ದರು. ನಿತ್ರಾಣಗೊಂಡಿದ್ದ ಅದನ್ನು, ದುಬಾರೆ ಶಿಬಿರದ ಸಾಕಾನೆಗಳ ನೆರವಿನಿಂದ ಎಬ್ಬಿಸಿ ನಿಲ್ಲಿಸುವ ಪ್ರಯತ್ನವನ್ನೂ ಅರಣ್ಯ ಇಲಾಖೆ ಸಿಬ್ಬಂದಿ ಮಾಡಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿತು.</p>.<p>ಮರಣೋತ್ತರ ಪರೀಕ್ಷೆ ಬಳಿಕ, ಕಾಡಾನೆಯ ಕಳೇಬರವನ್ನು ಹೂಳಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>