ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಣಿಕೊಪ್ಪಲು: ಕಾಡಾನೆ ಸಾವು

Last Updated 20 ನವೆಂಬರ್ 2020, 15:08 IST
ಅಕ್ಷರ ಗಾತ್ರ

ಗೋಣಿಕೊಪ್ಪಲು (ಕೊಡಗು ಜಿಲ್ಲೆ): ಶ್ರೀಮಂಗಲ ಸಮೀಪದ ಮಂಚಳ್ಳಿಯಲ್ಲಿ ಕಾಫಿ ತೋಟಕ್ಕೆ ಬಂದಿದ್ದ ಕಾಡಾನೆಯೊಂದು ಮೃತಪಟ್ಟಿದ್ದು, ಶುಕ್ರವಾರ ಬೆಳಕಿಗೆ ಬಂದಿದೆ.

ಬೆಳ್ಳಿಯಪ್ಪ ಅವರ ತೋಟಕ್ಕೆ ಬಂದಿದ್ದ ಅಂದಾಜು 20 ವರ್ಷದ ಹೆಣ್ಣಾನೆಯು ತೋಟದ ದಿಣ್ಣೆ ಹತ್ತುವಾಗ, 11 ಕೆ.ವಿ ಮಾರ್ಗದ ವಿದ್ಯುತ್ ತಂತಿ ತಗುಲಿ ಎರಡು ದಿನಗಳ ಹಿಂದೆಯೇ ಅಸುನೀಗಿದೆ. ಪಶು ವೈದ್ಯಾಧಿಕಾರಿ ಗಿರೀಶ್, ಮರಣೋತ್ತರ ಪರೀಕ್ಷೆ ನಡೆಸಿದರು. ಬಳಿಕ ಆನೆಯನ್ನು ಸುಡಲಾಯಿತು.

ಸ್ಥಳಕ್ಕೆ ಶ್ರೀಮಂಗಲ ಎಸಿಎಫ್ ಉತ್ತಪ್ಪ, ವಲಯ ಅರಣ್ಯಾಧಿಕಾರಿ ವೀರೇಂದ್ರ, ರಾಜೇಂದ್ರ ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT