<p><strong>ಕುಶಾಲನಗರ</strong>: ತಾಲ್ಲೂಕಿನ ಮೀನುಕೊಲ್ಲಿ ಮೀಸಲು ಅರಣ್ಯ ವ್ಯಾಪ್ತಿಯ ವಾಲ್ನೂರು ಹಾಗೂ ಮಾಲ್ದಾರೆ ಬಳಿಯ ಕಾವೇರಿ ನದಿಯಲ್ಲಿ ಮುಳುಗಿ ಹೆಣ್ಣಾನೆ ಮೃತಪಟ್ಟಿದ್ದು, ಗುರುವಾರ ಮೃತದೇಹ ಕಂಡು ಬಂದಿದೆ.</p>.<p>ನದಿಯ ಮಧ್ಯಭಾಗದಲ್ಲಿದ್ದ ಮೃತದೇಹವನ್ನು ಸಾಕಾನೆಯ ಸಹಾಯದಿಂದ ಹೊರ ತೆಗೆಯಲಾಯಿತು. ಎಸಿಎಫ್ ಎ.ಎ.ಗೋಪಾಲ, ಆರ್ಎಫ್ಓ ಆರ್.ರಕ್ಷಿತ್ ಹಾಗೂ ಮುಖ್ಯ ಪಶುವೈದ್ಯಾಧಿಕಾರಿ ಡಾ.ಮುಜೀಬ್, ಪಶುವೈದ್ಯಾಧಿಕಾರಿ ಡಾ.ಚಿಟ್ಟಿಯಪ್ಪ ನೇತೃತ್ವ ವಹಿಸಿದ್ದರು.</p>.<p>‘ಆನೆಗೆ ಗುಂಡು ತಗುಲಿಲ್ಲ, ವಿದ್ಯುತ್ ಸ್ಪರ್ಷವೂ ಆಗಿಲ್ಲ. ಮುಳುಗಿಯೇ ಮೃತಪಟ್ಟಿದೆ’ ಎಂದು ಅಧಿಕಾರಿಗಳು ದೃಢಪಡಿಸಿದರು. ಮಾಲ್ದಾರೆ ಅರಣ್ಯ ಪ್ರದೇಶದಲ್ಲಿ ಅಂತ್ಯಸಂಸ್ಕಾರ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ</strong>: ತಾಲ್ಲೂಕಿನ ಮೀನುಕೊಲ್ಲಿ ಮೀಸಲು ಅರಣ್ಯ ವ್ಯಾಪ್ತಿಯ ವಾಲ್ನೂರು ಹಾಗೂ ಮಾಲ್ದಾರೆ ಬಳಿಯ ಕಾವೇರಿ ನದಿಯಲ್ಲಿ ಮುಳುಗಿ ಹೆಣ್ಣಾನೆ ಮೃತಪಟ್ಟಿದ್ದು, ಗುರುವಾರ ಮೃತದೇಹ ಕಂಡು ಬಂದಿದೆ.</p>.<p>ನದಿಯ ಮಧ್ಯಭಾಗದಲ್ಲಿದ್ದ ಮೃತದೇಹವನ್ನು ಸಾಕಾನೆಯ ಸಹಾಯದಿಂದ ಹೊರ ತೆಗೆಯಲಾಯಿತು. ಎಸಿಎಫ್ ಎ.ಎ.ಗೋಪಾಲ, ಆರ್ಎಫ್ಓ ಆರ್.ರಕ್ಷಿತ್ ಹಾಗೂ ಮುಖ್ಯ ಪಶುವೈದ್ಯಾಧಿಕಾರಿ ಡಾ.ಮುಜೀಬ್, ಪಶುವೈದ್ಯಾಧಿಕಾರಿ ಡಾ.ಚಿಟ್ಟಿಯಪ್ಪ ನೇತೃತ್ವ ವಹಿಸಿದ್ದರು.</p>.<p>‘ಆನೆಗೆ ಗುಂಡು ತಗುಲಿಲ್ಲ, ವಿದ್ಯುತ್ ಸ್ಪರ್ಷವೂ ಆಗಿಲ್ಲ. ಮುಳುಗಿಯೇ ಮೃತಪಟ್ಟಿದೆ’ ಎಂದು ಅಧಿಕಾರಿಗಳು ದೃಢಪಡಿಸಿದರು. ಮಾಲ್ದಾರೆ ಅರಣ್ಯ ಪ್ರದೇಶದಲ್ಲಿ ಅಂತ್ಯಸಂಸ್ಕಾರ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>