ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಫಿ ತೋಟದಲ್ಲಿ ಆನೆ ಸಾವು

Last Updated 5 ಜುಲೈ 2021, 4:56 IST
ಅಕ್ಷರ ಗಾತ್ರ

ಗೋಣಿಕೊಪ್ಪಲು: ಕುಟ್ಟ ಬಳಿಯ ಪೂಜಿಕಲ್ಲು ವಿನ ಕಾಕೇರ ಕಾಳಪ್ಪ ಅವರ ಕಾಫಿ ತೋಟದಲ್ಲಿ ಅಂದಾಜು 15 ವರ್ಷ ಪ್ರಾಯದ ಗಂಡಾನೆ ಮೃತಪಟ್ಟಿದ್ದು, ಭಾನುವಾರ ಬೆಳಿಗ್ಗೆ ಪತ್ತೆಯಾಗಿದೆ.

ಆನೆಯ ಮೈಮೇಲೆ ಯಾವುದೇ ಗಾಯದ ಗುರುತುಗಳು ಕಂಡು ಬಂದಿಲ್ಲ. ಶನಿವಾರ ರಾತ್ರಿ ಮೃತಪಟ್ಟಿರಬಹುದು. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಸಾವಿಗೆ ಕಾರಣ ತಿಳಿಯಲಿದೆ ಎಂದು ಶ್ರೀಮಂಗಲ ವಲಯ ಅರಣ್ಯಾಧಿಕಾರಿ ವೀರೇಂದ್ರ ತಿಳಿಸಿದರು.

ತಿತಿಮತಿ ಎಸಿಎಫ್ ಉತ್ತಪ್ಪ, ಡಿಆರ್‌ಎಫ್ಒ ಬೋಪಣ್ಣ, ಅರಣ್ಯ ರಕ್ಷಕ ರಾಜೇಶ್ ಹಾಗೂ ಸಿಬ್ಬಂದಿ ವರ್ಗದವರು ಭೇಟಿ ನೀಡಿ ಆನೆಯ ಶವ ಸಂಸ್ಕಾರ ನೆರವೇರಿಸಿದರು. ಪಶು ವೈದ್ಯಾಧಿಕಾರಿ ಚಂದ್ರಶೇಖರ್ ಅವರು ಮರಣೋತ್ತರ ಪರೀಕ್ಷೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT