ಗೋಣಿಕೊಪ್ಪಲು (ಕೊಡಗು ಜಿಲ್ಲೆ): ಇಲ್ಲಿಗೆ ಸಮೀಪದ ಕುಟ್ಟ ಗ್ರಾಮದ ಕಾಫಿ ತೋಟವೊಂದರಲ್ಲಿ ವಿದ್ಯುತ್ ತಂತಿ ಸೊಂಡಿಲಿಗೆ ತಗುಲಿ ಕಾಡಾನೆಯೊಂದು ಶನಿವಾರ ಮೃತಪಟ್ಟಿದೆ.
ಕಾಫಿ ತೋಟದ ಮಧ್ಯೆ 11 ಕೆ.ವಿ ಸಾಮರ್ಥ್ಯದ ವಿದ್ಯುತ್ ತಂತಿ ಹಾದು ಹೋಗಿತ್ತು. ಇದು ಸೊಂಡಿಲಿಗೆ ತಗುಲಿ ಆನೆಯು ಸ್ಥಳದಲ್ಲೆ ಮೃತಪಟ್ಟಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ತೆರಳಿದ್ದು ಪರಿಶೀಲನೆ ನಡೆಸಿದ್ದಾರೆ.