<p><strong>ಸುಂಟಿಕೊಪ್ಪ (ಕೊಡಗು ಜಿಲ್ಲೆ)</strong>: ಇಲ್ಲಿನ ಸುಂಟಿಕೊಪ್ಪ ಸಮೀಪದ ಕೊಡಗರಹಳ್ಳಿ ಬಳಿಯ ಎಸ್ಟೇಟ್ವೊಂದರಲ್ಲಿ ವಿದ್ಯುತ್ ಆಘಾತಕ್ಕೆ ಒಳಗಾದ ಗಂಡಾನೆಯೊಂದು ಬುಧವಾರ ಮೃತಪಟ್ಟಿದೆ. ಒಂದು ವಾರದಲ್ಲಿ ಕೊಡಗು ಜಿಲ್ಲೆಯಲ್ಲಿ ಮೃತಪಟ್ಟ ಆನೆಗಳ ಸಂಖ್ಯೆ 4ಕ್ಕೆ ಏರಿದೆ.</p>.<p>‘ಕಬ್ಬಿಣದ ವಿದ್ಯುತ್ ಕಂಬವೊಂದಕ್ಕೆ ಆನೆ ತುರಿಸಿಕೊಳ್ಳಲು ಯತ್ನಿಸಿದಾಗ ಕಂಬ ಬಾಗಿ, ಅದರ ತಂತಿಗಳು ಕಂಬಕ್ಕೆ ತಗುಲಿದೆ. ಈ ವೇಳೆ ಕಬ್ಬಿಣದ ಕಂಬದಿಂದ ವಿದ್ಯುತ್ ಆಘಾತಕ್ಕೆ ಒಳಗಾದ ಸುಮಾರು 13–14 ವರ್ಷ ಗಂಡಾನೆ ಸ್ಥಳದಲ್ಲೇ ಮೃತಪಟ್ಟಿದೆ. ಈ ಬಗೆಯ ಕಬ್ಬಿಣದ ವಿದ್ಯುತ್ ಕಂಬ ತೀರಾ ಹಳೆಯದು. ಇಂತಹ ವಿದ್ಯುತ್ ಕಂಬಗಳನ್ನು ಬದಲಾಸುವಂತೆ ಸೆಸ್ಕ್ಗೆ ಪತ್ರ ಬರೆಯಲಾಗುವುದು’ ಎಂದು ಡಿಸಿಎಫ್ ಭಾಸ್ಕರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಸ್ಥಳಕ್ಕೆ ಡಿಸಿಎಫ್ ಭಾಸ್ಕರ್, ವಲಯ ಅರಣ್ಯಾಧಿಕಾರಿ ರತನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳೆದೊಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ಒಟ್ಟು 4 ಕಾಡಾನೆಗಳು ಮೃತಪಟ್ಟಿವೆ. ಅವುಗಳಲ್ಲಿ 2 ಸಹಜ ಕಾರಣಗಳಿಂದ ಮೃತಪಟ್ಟಿದ್ದರೆ, ಇನ್ನೆರಡು ವಿದ್ಯುತ್ ಆಘಾತದಿಂದ ಮೃತಪಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಂಟಿಕೊಪ್ಪ (ಕೊಡಗು ಜಿಲ್ಲೆ)</strong>: ಇಲ್ಲಿನ ಸುಂಟಿಕೊಪ್ಪ ಸಮೀಪದ ಕೊಡಗರಹಳ್ಳಿ ಬಳಿಯ ಎಸ್ಟೇಟ್ವೊಂದರಲ್ಲಿ ವಿದ್ಯುತ್ ಆಘಾತಕ್ಕೆ ಒಳಗಾದ ಗಂಡಾನೆಯೊಂದು ಬುಧವಾರ ಮೃತಪಟ್ಟಿದೆ. ಒಂದು ವಾರದಲ್ಲಿ ಕೊಡಗು ಜಿಲ್ಲೆಯಲ್ಲಿ ಮೃತಪಟ್ಟ ಆನೆಗಳ ಸಂಖ್ಯೆ 4ಕ್ಕೆ ಏರಿದೆ.</p>.<p>‘ಕಬ್ಬಿಣದ ವಿದ್ಯುತ್ ಕಂಬವೊಂದಕ್ಕೆ ಆನೆ ತುರಿಸಿಕೊಳ್ಳಲು ಯತ್ನಿಸಿದಾಗ ಕಂಬ ಬಾಗಿ, ಅದರ ತಂತಿಗಳು ಕಂಬಕ್ಕೆ ತಗುಲಿದೆ. ಈ ವೇಳೆ ಕಬ್ಬಿಣದ ಕಂಬದಿಂದ ವಿದ್ಯುತ್ ಆಘಾತಕ್ಕೆ ಒಳಗಾದ ಸುಮಾರು 13–14 ವರ್ಷ ಗಂಡಾನೆ ಸ್ಥಳದಲ್ಲೇ ಮೃತಪಟ್ಟಿದೆ. ಈ ಬಗೆಯ ಕಬ್ಬಿಣದ ವಿದ್ಯುತ್ ಕಂಬ ತೀರಾ ಹಳೆಯದು. ಇಂತಹ ವಿದ್ಯುತ್ ಕಂಬಗಳನ್ನು ಬದಲಾಸುವಂತೆ ಸೆಸ್ಕ್ಗೆ ಪತ್ರ ಬರೆಯಲಾಗುವುದು’ ಎಂದು ಡಿಸಿಎಫ್ ಭಾಸ್ಕರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಸ್ಥಳಕ್ಕೆ ಡಿಸಿಎಫ್ ಭಾಸ್ಕರ್, ವಲಯ ಅರಣ್ಯಾಧಿಕಾರಿ ರತನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳೆದೊಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ಒಟ್ಟು 4 ಕಾಡಾನೆಗಳು ಮೃತಪಟ್ಟಿವೆ. ಅವುಗಳಲ್ಲಿ 2 ಸಹಜ ಕಾರಣಗಳಿಂದ ಮೃತಪಟ್ಟಿದ್ದರೆ, ಇನ್ನೆರಡು ವಿದ್ಯುತ್ ಆಘಾತದಿಂದ ಮೃತಪಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>