ದುಬಾರೆ ಶಿಬಿರದಲ್ಲಿ ಮಾವುತರ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ನೀಡಲಾಗುತ್ತಿದೆ. ಜೊತೆಗೆ, ಆನೆಗೆ ರೇಡಿಯೊ ಕಾಲರ್ ಅಳವಡಿಸಿ ಕಾಡಿಗೆ ಬಿಡುವ ಪ್ರಕ್ರಿಯೆಗೆ ಕಾಲಾವಕಾಶ ಬೇಕು. ಆದ್ದರಿಂದ ವಿಳಂಬವಾಗಿದೆ. ಕೊರೊನಾ ಪ್ರಕರಣಗಳು ಕಡಿಮೆಯಾದ ಮೇಲೆ, ಸರ್ಕಾರದ ಆದೇಶದಂತೆ ಕಾಡಿಗೆ ಬಿಡಲಾಗುವುದು ಎಂದು ಅರಣ್ಯಾಧಿಕಾರಿಗಳು ಹೇಳುತ್ತಾರೆ.