<p><strong>ಸುಂಟಿಕೊಪ್ಪ</strong>: ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯ ತೋಟ ಮತ್ತು ಮನೆಗಳ ಸುತ್ತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.</p>.<p>ಪಟ್ಟಣದ ಅಂಚಿನಲ್ಲಿರುವ ಉಲುಗುಲಿ ತೋಟಕ್ಕೆ ಕಾಡಾನೆಗಳು ಲಗ್ಗೆ ಇಟ್ಟಿವೆ. ಕಾಫಿ, ತೆಂಗು, ಅಡಿಕೆ, ಜೇನುಪೆಟ್ಟಿಗೆ ಗಿಡಗಳನ್ನು ಧ್ವಂಸಗೊಳಿಸಿವೆ. ತೋಟದಲ್ಲಿದ್ದ ನೀರಿನ ಟ್ಯಾಂಕ್ ಅನ್ನು ಕೋರೆಯಿಂದ ತಿವಿದು ಹಾನಿಗೊಳಿಸಿವೆ.</p>.<p>ಇಲ್ಲಿ ಮಾತ್ರವಲ್ಲ ತೊಂಡೂರು, ಏಳಲನೇ ಹೊಸಕೋಟೆ, ಹೆರೂರು, ಹೊರೂರು, ಮತ್ತಿಕಾಡು, ಗುಂಡುಗುಟ್ಟಿ, ಪನ್ಯ, ಕಾಜೂರು, ಕಂಬಿಬಾಣೆ, ಚೆಟ್ಟಳ್ಳಿ, ಜಂಬೂರು, ನಾಕೂರು ಶಿರಂಗಾಲ, ಸೇರಿದಂತೆ ಹಲವು ತೋಟಗಳಲ್ಲಿ ಕಾಡಾನೆಗಳು ಹೆಚ್ಚಿನ ಹಾನಿ ಮಾಡಿವೆ.</p>.<p>ಬಾಳೆ, ಕಾಫಿ, ಹಲಸು, ಪಪ್ಪಾಯಿ, ಕರಿಮೆಣಸು, ಪೊಂಗರೆ ಮತ್ತಿತರ ಗಿಡಗಳನ್ನು ನಾಶಪಡಿಸಿರುವ ಕಾಡಾನೆಗಳು ಜನವಸತಿ ಪ್ರದೇಶಗಳಲ್ಲೂ ಕಾಣಿಸತೊಡಗಿದ್ದು, ಜನರು ಭಯದಲ್ಲೇ ಇರುವಂತಹ ಸ್ಥಿತಿ ನಿರ್ಮಾಣವಾಗಿದೆ.</p>.<p>ಸಮೀಪದ ಏಳನೇ ಹೊಸಕೋಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂದು ವಾರದಿಂದ ನಿರಂತರವಾಗಿ ರಾತ್ರಿ 7 ಗಂಟೆಯಿಂದ ರಾತ್ರಿ 11ಗಂಟೆಯ ಸಮಯದಲ್ಲಿ ಕಾಡಾನೆಗಳು ರಸ್ತೆಯಲ್ಲಿ ಸಂಚರಿಸುತ್ತಿವೆ. ಇದರಿಂದ ವಾಹನ ಚಾಲಕರು ಆತಂಕಗೊಂಡಿದ್ದಾರೆ.</p>.<p>ಏಳನೇ ಹೊಸಕೋಟೆಯ ವ್ಯಾಪ್ತಿಯಲ್ಲೂ ಕಾಡಾನೆಗಳಿದ್ದು, ತೊಡೂರು ಗ್ರಾಮದ ಮನೆಗಳತ್ತ ಸಂಚರಿಸಿ ಆತಂಕ ಮೂಡಿಸಿವೆ. ಇದರಿಂದಾಗಿ ನಿವಾಸಿಗಳು ಮನೆ ಬಿಟ್ಟು ಹೊರಗೆ ಬರದಂತಹ ಸ್ಥಿತಿ ಎದುರಾಗಿದೆ.</p>.<p>ಸಮೀಪದ ಹರದೂರು ಗ್ರಾಮ ಪಂಚಾಯಿತಿಗೆ ಸೇರಿದ ಗುಂಡುಗುಟ್ಟಿ ಮತ್ತು ಪನ್ಯದ ತೋಟಗಳಲ್ಲಿ ಕಾಡಾನೆಗಳು ಮರಿಯೊಂದಿಗೆ ಬೀಡುಬಿ ಟ್ಟು ಫಸಲು ಭರಿತ ಬೆಳೆಗಳನ್ನು ನಾಶಪಡಿಸುತ್ತಿವೆ.</p>.<p>ಗುಂಡುಗುಟ್ಟಿ ತೋಟದ ರಸ್ತೆ ಬದಿಯ ತಂತಿಬೇಲಿಯನ್ನು ಮುರಿದು ತೋಟದಲ್ಲಿದ್ದ ಕರಿಮೆಣಸು, ಕಾಫಿ, ಬಿದಿರು ಗಿಡಗಳನ್ನು ತುಳಿದು ಹಾಕಿ ನಂತರ ಅಲ್ಲೇ ಅನತಿ ದೂರದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿದ್ದ ಬಿದಿರುಗಳನ್ನು ಮುರಿದು ಹಾಕಿವೆ.</p>.<p>ಗುಂಡುಗುಟ್ಟಿ ಗ್ರಾಮದ ಮುತ್ತಿನ ತೋಟ, ಸಮೀಪದ ಪನ್ಯದಲ್ಲಿರುವ ಕೆ.ಪಿ.ಜಗನ್ನಾಥ್ ಅವರ ತೋಟ, ಸಮೀಪದ ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಡವಾರೆ, ಐಗೂರು ಗ್ರಾಮದ ಹಾರಂಗಿ ಹಿನ್ನಿರಿನ ಪ್ರದೇಶದಲ್ಲಿ ಕಾಡಾನೆಗಳು ಬೆಳೆಗಳನ್ನು ನಾಶಪಡಿಸಿವೆ.</p>.<p>ಒಂದು ತಿಂಗಳುಗಳಿಂದ ಕಂಬಿಬಾಣೆ ಸುತ್ತಲಿನ ತೋಟಗಳಲ್ಲಿ ಕಾಡಾನೆಗಳು ಬೀಡುಬಿಟ್ಟಿದೆ. ಕಂಬಿಬಾಣೆ ಕಾಫಿ ಬೆಳೆಗಾರ ಚಂದ್ರ, ಶಿವ ಅವರಿಗೆ ಸೇರಿದ ಕಾಫಿ ತೋಟಕ್ಕೆ ನುಗ್ಗಿದ ಕಾಡಾನೆಗಳ ಹಿಂಡು ಕಾಫಿ, ಮೆಣಸು, ಬಾಳೆ ಗಿಡಗಳನ್ನು ನಾಶಪಡಿಸಿದೆ.</p>.<div><blockquote>ತೋಟದ ಬೆಳೆಗಳನ್ನು ಧ್ವಂಸಗೊಳಿಸುತ್ತಿದ್ದ ಕಾಡಾನೆಗಳು ಇದೀಗ ಹಗಲು ವೇಳೆಯಲ್ಲಿ ರಸ್ತೆಯಲ್ಲಿ ಸಂಚರಿಸುತ್ತಿರುವುದು ಭಯ ಉಂಟು ಮಾಡಿದೆ </blockquote><span class="attribution">ದಿನೇಶ್ ತೊಂಡೂರು ನಿವಾಸಿ</span></div>.<div><blockquote>ಕಾಡಾನೆಗಳು ಫಸಲು ಮಾತ್ರವಲ್ಲ ಜನರ ಪ್ರಾಣಕ್ಕೂ ಅಪಾಯ ತರುವ ಸಾಧ್ಯತೆ ಇದೆ. ಅನಾಹುತ ಸಂಭವಿಸುವ ಮುನ್ನ ಅರಣ್ಯ ಇಲಾಖೆಯವರು ಸೂಕ್ತ ಕ್ರಮ ಕೈಗೊಳ್ಳಬೇಕು </blockquote><span class="attribution">ಅಬ್ಧುಲ್ ಸಲಾಂ ಉಲುಗುಲಿ</span></div>.<p> ಹಿಂದೇಟು ಹಾಕುವ ಆಟೊ ಚಾಲಕರು ರಾತ್ರಿ ವೇಳೆಯಲ್ಲಿ ಕಾಡಾನೆಗಳು ಗ್ರಾಮಗಳ ರಸ್ತೆ ಮತ್ತು ತೋಟಗಳಲ್ಲಿ ಸಂಚರಿಸುತ್ತಿರುವುದರಿಂದ ಆ ಗ್ರಾಮಗಳಿಗೆ ಬಾಡಿಗೆಗೆ ಹೋಗಲು ಚಾಲಕರು ಹಿಂದೇಟು ಹಾಕುತ್ತಿದ್ದಾರೆ. ದೂರದ ಪ್ರಯಾಣ ಮುಗಿಸಿ ಸುಂಟಿಕೊಪ್ಪ ಬಸ್ ನಿಲ್ದಾಣಕ್ಕೆ ಬಂದು ಹೊರೂರು ಹೆರೂರು ನಾಕೂರು ಶಿರಂಗಾಲ ತೊಂಡೂರು ಕಂಬಿಬಾಣೆಗಳಿಗೆ ಆಟೊ ಬಾಡಿಗೆಗೆ ಕರೆದರೆ ಚಾಲಕರು ಮುಂಜಾನೆ ಆಗುವವರೆಗೆ ಆ ಸ್ಥಳಕ್ಕೆ ಬರುವುದಿಲ್ಲ ಎನ್ನುತ್ತಾರೆ. ಇದರಿಂದಾಗಿ ಬೆಳಗಿನವರೆಗೂ ಅಂಗಡಿಗಳ ಮುಂದೆ ಕುಳಿತು ಕಾಲಕಳೆದು ಬೆಳಕಾದ ಮೇಲೆ ಬಾಡಿಗೆ ಆಟೊ ಹಿಡಿದು ಹೋಗುವ ಸ್ಥಿತಿ ಎದುರಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಂಟಿಕೊಪ್ಪ</strong>: ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯ ತೋಟ ಮತ್ತು ಮನೆಗಳ ಸುತ್ತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.</p>.<p>ಪಟ್ಟಣದ ಅಂಚಿನಲ್ಲಿರುವ ಉಲುಗುಲಿ ತೋಟಕ್ಕೆ ಕಾಡಾನೆಗಳು ಲಗ್ಗೆ ಇಟ್ಟಿವೆ. ಕಾಫಿ, ತೆಂಗು, ಅಡಿಕೆ, ಜೇನುಪೆಟ್ಟಿಗೆ ಗಿಡಗಳನ್ನು ಧ್ವಂಸಗೊಳಿಸಿವೆ. ತೋಟದಲ್ಲಿದ್ದ ನೀರಿನ ಟ್ಯಾಂಕ್ ಅನ್ನು ಕೋರೆಯಿಂದ ತಿವಿದು ಹಾನಿಗೊಳಿಸಿವೆ.</p>.<p>ಇಲ್ಲಿ ಮಾತ್ರವಲ್ಲ ತೊಂಡೂರು, ಏಳಲನೇ ಹೊಸಕೋಟೆ, ಹೆರೂರು, ಹೊರೂರು, ಮತ್ತಿಕಾಡು, ಗುಂಡುಗುಟ್ಟಿ, ಪನ್ಯ, ಕಾಜೂರು, ಕಂಬಿಬಾಣೆ, ಚೆಟ್ಟಳ್ಳಿ, ಜಂಬೂರು, ನಾಕೂರು ಶಿರಂಗಾಲ, ಸೇರಿದಂತೆ ಹಲವು ತೋಟಗಳಲ್ಲಿ ಕಾಡಾನೆಗಳು ಹೆಚ್ಚಿನ ಹಾನಿ ಮಾಡಿವೆ.</p>.<p>ಬಾಳೆ, ಕಾಫಿ, ಹಲಸು, ಪಪ್ಪಾಯಿ, ಕರಿಮೆಣಸು, ಪೊಂಗರೆ ಮತ್ತಿತರ ಗಿಡಗಳನ್ನು ನಾಶಪಡಿಸಿರುವ ಕಾಡಾನೆಗಳು ಜನವಸತಿ ಪ್ರದೇಶಗಳಲ್ಲೂ ಕಾಣಿಸತೊಡಗಿದ್ದು, ಜನರು ಭಯದಲ್ಲೇ ಇರುವಂತಹ ಸ್ಥಿತಿ ನಿರ್ಮಾಣವಾಗಿದೆ.</p>.<p>ಸಮೀಪದ ಏಳನೇ ಹೊಸಕೋಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂದು ವಾರದಿಂದ ನಿರಂತರವಾಗಿ ರಾತ್ರಿ 7 ಗಂಟೆಯಿಂದ ರಾತ್ರಿ 11ಗಂಟೆಯ ಸಮಯದಲ್ಲಿ ಕಾಡಾನೆಗಳು ರಸ್ತೆಯಲ್ಲಿ ಸಂಚರಿಸುತ್ತಿವೆ. ಇದರಿಂದ ವಾಹನ ಚಾಲಕರು ಆತಂಕಗೊಂಡಿದ್ದಾರೆ.</p>.<p>ಏಳನೇ ಹೊಸಕೋಟೆಯ ವ್ಯಾಪ್ತಿಯಲ್ಲೂ ಕಾಡಾನೆಗಳಿದ್ದು, ತೊಡೂರು ಗ್ರಾಮದ ಮನೆಗಳತ್ತ ಸಂಚರಿಸಿ ಆತಂಕ ಮೂಡಿಸಿವೆ. ಇದರಿಂದಾಗಿ ನಿವಾಸಿಗಳು ಮನೆ ಬಿಟ್ಟು ಹೊರಗೆ ಬರದಂತಹ ಸ್ಥಿತಿ ಎದುರಾಗಿದೆ.</p>.<p>ಸಮೀಪದ ಹರದೂರು ಗ್ರಾಮ ಪಂಚಾಯಿತಿಗೆ ಸೇರಿದ ಗುಂಡುಗುಟ್ಟಿ ಮತ್ತು ಪನ್ಯದ ತೋಟಗಳಲ್ಲಿ ಕಾಡಾನೆಗಳು ಮರಿಯೊಂದಿಗೆ ಬೀಡುಬಿ ಟ್ಟು ಫಸಲು ಭರಿತ ಬೆಳೆಗಳನ್ನು ನಾಶಪಡಿಸುತ್ತಿವೆ.</p>.<p>ಗುಂಡುಗುಟ್ಟಿ ತೋಟದ ರಸ್ತೆ ಬದಿಯ ತಂತಿಬೇಲಿಯನ್ನು ಮುರಿದು ತೋಟದಲ್ಲಿದ್ದ ಕರಿಮೆಣಸು, ಕಾಫಿ, ಬಿದಿರು ಗಿಡಗಳನ್ನು ತುಳಿದು ಹಾಕಿ ನಂತರ ಅಲ್ಲೇ ಅನತಿ ದೂರದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿದ್ದ ಬಿದಿರುಗಳನ್ನು ಮುರಿದು ಹಾಕಿವೆ.</p>.<p>ಗುಂಡುಗುಟ್ಟಿ ಗ್ರಾಮದ ಮುತ್ತಿನ ತೋಟ, ಸಮೀಪದ ಪನ್ಯದಲ್ಲಿರುವ ಕೆ.ಪಿ.ಜಗನ್ನಾಥ್ ಅವರ ತೋಟ, ಸಮೀಪದ ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಡವಾರೆ, ಐಗೂರು ಗ್ರಾಮದ ಹಾರಂಗಿ ಹಿನ್ನಿರಿನ ಪ್ರದೇಶದಲ್ಲಿ ಕಾಡಾನೆಗಳು ಬೆಳೆಗಳನ್ನು ನಾಶಪಡಿಸಿವೆ.</p>.<p>ಒಂದು ತಿಂಗಳುಗಳಿಂದ ಕಂಬಿಬಾಣೆ ಸುತ್ತಲಿನ ತೋಟಗಳಲ್ಲಿ ಕಾಡಾನೆಗಳು ಬೀಡುಬಿಟ್ಟಿದೆ. ಕಂಬಿಬಾಣೆ ಕಾಫಿ ಬೆಳೆಗಾರ ಚಂದ್ರ, ಶಿವ ಅವರಿಗೆ ಸೇರಿದ ಕಾಫಿ ತೋಟಕ್ಕೆ ನುಗ್ಗಿದ ಕಾಡಾನೆಗಳ ಹಿಂಡು ಕಾಫಿ, ಮೆಣಸು, ಬಾಳೆ ಗಿಡಗಳನ್ನು ನಾಶಪಡಿಸಿದೆ.</p>.<div><blockquote>ತೋಟದ ಬೆಳೆಗಳನ್ನು ಧ್ವಂಸಗೊಳಿಸುತ್ತಿದ್ದ ಕಾಡಾನೆಗಳು ಇದೀಗ ಹಗಲು ವೇಳೆಯಲ್ಲಿ ರಸ್ತೆಯಲ್ಲಿ ಸಂಚರಿಸುತ್ತಿರುವುದು ಭಯ ಉಂಟು ಮಾಡಿದೆ </blockquote><span class="attribution">ದಿನೇಶ್ ತೊಂಡೂರು ನಿವಾಸಿ</span></div>.<div><blockquote>ಕಾಡಾನೆಗಳು ಫಸಲು ಮಾತ್ರವಲ್ಲ ಜನರ ಪ್ರಾಣಕ್ಕೂ ಅಪಾಯ ತರುವ ಸಾಧ್ಯತೆ ಇದೆ. ಅನಾಹುತ ಸಂಭವಿಸುವ ಮುನ್ನ ಅರಣ್ಯ ಇಲಾಖೆಯವರು ಸೂಕ್ತ ಕ್ರಮ ಕೈಗೊಳ್ಳಬೇಕು </blockquote><span class="attribution">ಅಬ್ಧುಲ್ ಸಲಾಂ ಉಲುಗುಲಿ</span></div>.<p> ಹಿಂದೇಟು ಹಾಕುವ ಆಟೊ ಚಾಲಕರು ರಾತ್ರಿ ವೇಳೆಯಲ್ಲಿ ಕಾಡಾನೆಗಳು ಗ್ರಾಮಗಳ ರಸ್ತೆ ಮತ್ತು ತೋಟಗಳಲ್ಲಿ ಸಂಚರಿಸುತ್ತಿರುವುದರಿಂದ ಆ ಗ್ರಾಮಗಳಿಗೆ ಬಾಡಿಗೆಗೆ ಹೋಗಲು ಚಾಲಕರು ಹಿಂದೇಟು ಹಾಕುತ್ತಿದ್ದಾರೆ. ದೂರದ ಪ್ರಯಾಣ ಮುಗಿಸಿ ಸುಂಟಿಕೊಪ್ಪ ಬಸ್ ನಿಲ್ದಾಣಕ್ಕೆ ಬಂದು ಹೊರೂರು ಹೆರೂರು ನಾಕೂರು ಶಿರಂಗಾಲ ತೊಂಡೂರು ಕಂಬಿಬಾಣೆಗಳಿಗೆ ಆಟೊ ಬಾಡಿಗೆಗೆ ಕರೆದರೆ ಚಾಲಕರು ಮುಂಜಾನೆ ಆಗುವವರೆಗೆ ಆ ಸ್ಥಳಕ್ಕೆ ಬರುವುದಿಲ್ಲ ಎನ್ನುತ್ತಾರೆ. ಇದರಿಂದಾಗಿ ಬೆಳಗಿನವರೆಗೂ ಅಂಗಡಿಗಳ ಮುಂದೆ ಕುಳಿತು ಕಾಲಕಳೆದು ಬೆಳಕಾದ ಮೇಲೆ ಬಾಡಿಗೆ ಆಟೊ ಹಿಡಿದು ಹೋಗುವ ಸ್ಥಿತಿ ಎದುರಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>