<p><strong>ಕುಶಾಲನಗರ </strong>(ಕೊಡಗು): ದುಬಾರೆ ಸಾಕಾನೆ ಶಿಬಿರದಲ್ಲಿ ಭಾನುವಾರ ಸಾಕಾನೆಗಳ ಆರೋಗ್ಯ ತಪಾಸಣಾ ನಡೆಸಲಾಯಿತು.</p>.<p>ಅರಣ್ಯ ಇಲಾಖೆ ವತಿಯಿಂದ ಆಯೋಜಿಸಿದ್ದ ಶಿಬಿರದಲ್ಲಿ ಹಿರಿಯ ಪಶು ವೈದ್ಯಾಧಿಕಾರಿ ಡಾ.ಚೆಟ್ಟಿಯಪ್ಪ ನೇತೃತ್ವದಲ್ಲಿ ಡೆಹ್ರಾಡೂನ್ ವೈದ್ಯರ ತಂಡದಿಂದ 31 ಆನೆಗಳನ್ನು ತಪಾಸಣೆ ಮಾಡಲಾಯಿತು.</p>.<p>ಎಲ್ಲ ಆನೆಗಳ ರಕ್ತ ಸಂಗ್ರಹಿಸಿ ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗುತ್ತಿದೆ. ಆನೆಗಳಿಗೆ ಟಿ.ಬಿ ಸೇರಿದಂತೆ ಸಾಂಕ್ರಾಮಿಕ ರೋಗಗಳ ಪತ್ತೆಗಾಗಿ ಮೂರು ತಿಂಗಳಿಗೊಮ್ಮೆ ಆರೋಗ್ಯ ಶಿಬಿರ ಏರ್ಪಡಿಸಲಾಗುತ್ತಿದೆ ಎಂದು ಕುಶಾಲನಗರ ವಲಯ ಅರಣ್ಯಾಧಿಕಾರಿ ಅನನ್ಯ ಕುಮಾರ್ ತಿಳಿಸಿದ್ದಾರೆ.</p>.<p>ಡಾ.ಸನತ್ ಮುಳಿಯ, ಜರ್ಮನಿ ಸಂಸ್ಥೆಯ ಡಾ.ನವನೀತ್, ಡಾ.ತಮ್ಮಯ್ಯ ಹಾಗೂ ದುಬಾರೆ ಉಪ ವಲಯ ಅರಣ್ಯಾಧಿಕಾರಿ ಕನ್ನಂಡ ರಂಜನ್ ಹಾಗೂ ಸಿಬ್ಬಂದಿಗಳು ಶಿಬಿರದಲ್ಲಿ ಪಾಲ್ಗೊಂಡಿದ್ದರು.</p>.<p>13 ಆನೆಗಳಿಗೆ ರೇಡಿಯೋ ಕಾಲರ್: ಕೊಡಗು ಜಿಲ್ಲೆಯ ವಿರಾಜಪೇಟೆ ವ್ಯಾಪ್ತಿಯ 3 ಹೆಣ್ಣಾನೆ ಹಾಗೂ ಹಾಸನ ಜಿಲ್ಲಾ ಗಡಿಭಾಗದ 3 ಆನೆಗಳು ಸೇರಿದಂತೆ ಒಟ್ಟು 13 ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಸಲಾಗಿದೆ.</p>.<p>ಅರಣ್ಯ ಇಲಾಖೆ, ಡೆಹ್ರಾಡೂನ್ ವೈಲ್ಡ್ ಲೈಫ್ ಇನ್ಸ್ಟಿಟ್ಯೂಟ್ ಹಾಗೂ ಜರ್ಮನಿಯ ಜಿಐಜೆಡ್ ಸಂಸ್ಥೆಗಳ ಸಹಯೋಗದೊಂದಿಗೆ ಈ ಯೋಜನೆ ಅನುಷ್ಠಾನ ಮಾಡಲಾಗುತ್ತಿದೆ. ಕಾಡಿನಿಂದ ನಾಡಿಗೆ ಲಗ್ಗೆ ಹಾಕುವ ಹಾಗೂ ಪುಂಡಾನೆಗಳ ಚಲನವಲನ ಪ್ರತಿ ಗಂಟೆಗೊಮ್ಮೆ ಸಂಗ್ರಹಿಸಿ ಅವುಗಳ ನಿಯಂತ್ರಣಕ್ಕೆ ಕಾಲರ್ ಸಹಕಾರಿಯಾಗಿದೆ ಎಂದು ಡೆಹ್ರಾಡೂನ್ ಸಂಸ್ಥೆಯ ಡಾ.ಸನತ್ ಮುಳಿಯ ತಿಳಿಸಿದ್ದಾರೆ.</p>.<p>ಕಾಡಾನೆಗಳನ್ನು ನಿಯಂತ್ರಿಸುವ ಉದ್ದೇಶದಿಂದ ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಸಲಾಗುತ್ತಿದೆ. ಆನೆಗಳ ಮಾಹಿತಿ ಸಂಗ್ರಹಿಸಿ ಅವುಗಳಿಂದ ಅನಾಹುತ ತಪ್ಪಿಸಲು ಇದರಿಂದ ಸಹಕಾರಿಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ </strong>(ಕೊಡಗು): ದುಬಾರೆ ಸಾಕಾನೆ ಶಿಬಿರದಲ್ಲಿ ಭಾನುವಾರ ಸಾಕಾನೆಗಳ ಆರೋಗ್ಯ ತಪಾಸಣಾ ನಡೆಸಲಾಯಿತು.</p>.<p>ಅರಣ್ಯ ಇಲಾಖೆ ವತಿಯಿಂದ ಆಯೋಜಿಸಿದ್ದ ಶಿಬಿರದಲ್ಲಿ ಹಿರಿಯ ಪಶು ವೈದ್ಯಾಧಿಕಾರಿ ಡಾ.ಚೆಟ್ಟಿಯಪ್ಪ ನೇತೃತ್ವದಲ್ಲಿ ಡೆಹ್ರಾಡೂನ್ ವೈದ್ಯರ ತಂಡದಿಂದ 31 ಆನೆಗಳನ್ನು ತಪಾಸಣೆ ಮಾಡಲಾಯಿತು.</p>.<p>ಎಲ್ಲ ಆನೆಗಳ ರಕ್ತ ಸಂಗ್ರಹಿಸಿ ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗುತ್ತಿದೆ. ಆನೆಗಳಿಗೆ ಟಿ.ಬಿ ಸೇರಿದಂತೆ ಸಾಂಕ್ರಾಮಿಕ ರೋಗಗಳ ಪತ್ತೆಗಾಗಿ ಮೂರು ತಿಂಗಳಿಗೊಮ್ಮೆ ಆರೋಗ್ಯ ಶಿಬಿರ ಏರ್ಪಡಿಸಲಾಗುತ್ತಿದೆ ಎಂದು ಕುಶಾಲನಗರ ವಲಯ ಅರಣ್ಯಾಧಿಕಾರಿ ಅನನ್ಯ ಕುಮಾರ್ ತಿಳಿಸಿದ್ದಾರೆ.</p>.<p>ಡಾ.ಸನತ್ ಮುಳಿಯ, ಜರ್ಮನಿ ಸಂಸ್ಥೆಯ ಡಾ.ನವನೀತ್, ಡಾ.ತಮ್ಮಯ್ಯ ಹಾಗೂ ದುಬಾರೆ ಉಪ ವಲಯ ಅರಣ್ಯಾಧಿಕಾರಿ ಕನ್ನಂಡ ರಂಜನ್ ಹಾಗೂ ಸಿಬ್ಬಂದಿಗಳು ಶಿಬಿರದಲ್ಲಿ ಪಾಲ್ಗೊಂಡಿದ್ದರು.</p>.<p>13 ಆನೆಗಳಿಗೆ ರೇಡಿಯೋ ಕಾಲರ್: ಕೊಡಗು ಜಿಲ್ಲೆಯ ವಿರಾಜಪೇಟೆ ವ್ಯಾಪ್ತಿಯ 3 ಹೆಣ್ಣಾನೆ ಹಾಗೂ ಹಾಸನ ಜಿಲ್ಲಾ ಗಡಿಭಾಗದ 3 ಆನೆಗಳು ಸೇರಿದಂತೆ ಒಟ್ಟು 13 ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಸಲಾಗಿದೆ.</p>.<p>ಅರಣ್ಯ ಇಲಾಖೆ, ಡೆಹ್ರಾಡೂನ್ ವೈಲ್ಡ್ ಲೈಫ್ ಇನ್ಸ್ಟಿಟ್ಯೂಟ್ ಹಾಗೂ ಜರ್ಮನಿಯ ಜಿಐಜೆಡ್ ಸಂಸ್ಥೆಗಳ ಸಹಯೋಗದೊಂದಿಗೆ ಈ ಯೋಜನೆ ಅನುಷ್ಠಾನ ಮಾಡಲಾಗುತ್ತಿದೆ. ಕಾಡಿನಿಂದ ನಾಡಿಗೆ ಲಗ್ಗೆ ಹಾಕುವ ಹಾಗೂ ಪುಂಡಾನೆಗಳ ಚಲನವಲನ ಪ್ರತಿ ಗಂಟೆಗೊಮ್ಮೆ ಸಂಗ್ರಹಿಸಿ ಅವುಗಳ ನಿಯಂತ್ರಣಕ್ಕೆ ಕಾಲರ್ ಸಹಕಾರಿಯಾಗಿದೆ ಎಂದು ಡೆಹ್ರಾಡೂನ್ ಸಂಸ್ಥೆಯ ಡಾ.ಸನತ್ ಮುಳಿಯ ತಿಳಿಸಿದ್ದಾರೆ.</p>.<p>ಕಾಡಾನೆಗಳನ್ನು ನಿಯಂತ್ರಿಸುವ ಉದ್ದೇಶದಿಂದ ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಸಲಾಗುತ್ತಿದೆ. ಆನೆಗಳ ಮಾಹಿತಿ ಸಂಗ್ರಹಿಸಿ ಅವುಗಳಿಂದ ಅನಾಹುತ ತಪ್ಪಿಸಲು ಇದರಿಂದ ಸಹಕಾರಿಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>