9.30ರಿಂದ ದೇವಿಯ ದರ್ಶನ ದೊರೆಯಿತು. ನಂತರ ಭಕ್ತರು ದೇವಿಯಲ್ಲಿ ತಮ್ಮ ಬೇಡಿಕೆ ಮತ್ತು ಹರಕೆ ಸಲ್ಲಿಸಿದರು.
ಮಹಾಮಂಗಳಾರತಿ, ಪ್ರಸಾದ ವಿನಿಯೋಗ, ಅನ್ನಸಂತರ್ಪಣೆ ನಡೆಯಿತು. ಸುಂಟಿಕೊಪ್ಪ, ಗದ್ದೆಹಳ್ಳ, ಬಾಳೆಕಾಡು, ಕೆದಕಲ್, ಕಂಬಿಬಾಣೆ, ಮಾದಾಪುರ ಸೇರಿ ಕೇರಳ ರಾಜ್ಯದ ಭಕ್ತರು ಆಗಮಿಸಿದ್ದರು. ದೇವಾಲಯದ ಮುಖ್ಯಸ್ಥರಾದ ಪಿ.ಆರ್.ಸುಕುಮಾರ್, ಸುನಿಲ್ ಕುಮಾರ್ ಸೇರಿದಂತೆ ಇದ್ದರು.