<p><strong>ಸುಂಟಿಕೊಪ್ಪ</strong>: ಇಲ್ಲಿನ ಗದ್ದೆಹಳ್ಳದ ಕೊಡಂಗಲ್ಲೂರು ಭದ್ರಕಾಳಿ ಕುರುಂಬ, ಭಗವತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು.</p>.<p>ಶನಿವಾರ ಬೆಳಿಗ್ಗೆ ಗಣಪತಿ ಹೋಮದೊಂದಿಗೆ ವೈದಿಕ ಕೈಂಕರ್ಯಗಳಿಗೆ ಚಾಲನೆ ದೊರೆಯಿತು. ಸಂಜೆ ಗಣಪತಿ ಪೂಜೆ, ಸುಬ್ರಹ್ಮಣ್ಯ ದೇವರ ಪೂಜೆ, ಮುತ್ತಪ್ಪ ದೇವರಿಗೆ ಪೈಂಗುತ್ತಿ, ರಾತ್ರಿ ಚಾಮುಂಡೇಶ್ವರಿ ಪೂಜೆ, ಗುಳಿಗನ ಪೂಜೆ, ಭದ್ರಕಾಳಿ ದೇವಿಗೆ ಅರ್ಚನೆ ನಡೆಯಿತು.</p>.<p>ಅನಂತರ ದೇವಿ ಕಾರಣಿಕ ದರ್ಶನ ಭಕ್ತರಿಗೆ ದೊರೆಯಿತು. ರಾತ್ರಿ, ವಸೂರಿಮಲೆ ತಲಪುರಿ ಸ್ನಾನ, ಮೆರವಣಿಗೆ ಆಕರ್ಷಣೀಯವಾಗಿ ಮೂಡಿಬಂತು. ದಾರಿಯುದ್ದಕ್ಕೂ ಭಕ್ತರ ಉದ್ಘೋಷದೊಂದಿಗೆ ಕೇರಳದ ಚಂಡೆ ವಾದ್ಯ, ಹಣತೆ ಹಿಡಿದು ಮಹಿಳೆಯರು ಮಕ್ಕಳು ಮೆರವಣಿಗೆ ಮೂಲಕ ಸಾಗಿ ನಂತರ ದೇವಾಲಯಕ್ಕೆ ತಲುಪಿತು.</p>.<p>9.30ರಿಂದ ದೇವಿಯ ದರ್ಶನ ದೊರೆಯಿತು. ನಂತರ ಭಕ್ತರು ದೇವಿಯಲ್ಲಿ ತಮ್ಮ ಬೇಡಿಕೆ ಮತ್ತು ಹರಕೆ ಸಲ್ಲಿಸಿದರು. <br> ಮಹಾಮಂಗಳಾರತಿ, ಪ್ರಸಾದ ವಿನಿಯೋಗ, ಅನ್ನಸಂತರ್ಪಣೆ ನಡೆಯಿತು. ಸುಂಟಿಕೊಪ್ಪ, ಗದ್ದೆಹಳ್ಳ, ಬಾಳೆಕಾಡು, ಕೆದಕಲ್, ಕಂಬಿಬಾಣೆ, ಮಾದಾಪುರ ಸೇರಿ ಕೇರಳ ರಾಜ್ಯದ ಭಕ್ತರು ಆಗಮಿಸಿದ್ದರು. ದೇವಾಲಯದ ಮುಖ್ಯಸ್ಥರಾದ ಪಿ.ಆರ್.ಸುಕುಮಾರ್, ಸುನಿಲ್ ಕುಮಾರ್ ಸೇರಿದಂತೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಂಟಿಕೊಪ್ಪ</strong>: ಇಲ್ಲಿನ ಗದ್ದೆಹಳ್ಳದ ಕೊಡಂಗಲ್ಲೂರು ಭದ್ರಕಾಳಿ ಕುರುಂಬ, ಭಗವತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು.</p>.<p>ಶನಿವಾರ ಬೆಳಿಗ್ಗೆ ಗಣಪತಿ ಹೋಮದೊಂದಿಗೆ ವೈದಿಕ ಕೈಂಕರ್ಯಗಳಿಗೆ ಚಾಲನೆ ದೊರೆಯಿತು. ಸಂಜೆ ಗಣಪತಿ ಪೂಜೆ, ಸುಬ್ರಹ್ಮಣ್ಯ ದೇವರ ಪೂಜೆ, ಮುತ್ತಪ್ಪ ದೇವರಿಗೆ ಪೈಂಗುತ್ತಿ, ರಾತ್ರಿ ಚಾಮುಂಡೇಶ್ವರಿ ಪೂಜೆ, ಗುಳಿಗನ ಪೂಜೆ, ಭದ್ರಕಾಳಿ ದೇವಿಗೆ ಅರ್ಚನೆ ನಡೆಯಿತು.</p>.<p>ಅನಂತರ ದೇವಿ ಕಾರಣಿಕ ದರ್ಶನ ಭಕ್ತರಿಗೆ ದೊರೆಯಿತು. ರಾತ್ರಿ, ವಸೂರಿಮಲೆ ತಲಪುರಿ ಸ್ನಾನ, ಮೆರವಣಿಗೆ ಆಕರ್ಷಣೀಯವಾಗಿ ಮೂಡಿಬಂತು. ದಾರಿಯುದ್ದಕ್ಕೂ ಭಕ್ತರ ಉದ್ಘೋಷದೊಂದಿಗೆ ಕೇರಳದ ಚಂಡೆ ವಾದ್ಯ, ಹಣತೆ ಹಿಡಿದು ಮಹಿಳೆಯರು ಮಕ್ಕಳು ಮೆರವಣಿಗೆ ಮೂಲಕ ಸಾಗಿ ನಂತರ ದೇವಾಲಯಕ್ಕೆ ತಲುಪಿತು.</p>.<p>9.30ರಿಂದ ದೇವಿಯ ದರ್ಶನ ದೊರೆಯಿತು. ನಂತರ ಭಕ್ತರು ದೇವಿಯಲ್ಲಿ ತಮ್ಮ ಬೇಡಿಕೆ ಮತ್ತು ಹರಕೆ ಸಲ್ಲಿಸಿದರು. <br> ಮಹಾಮಂಗಳಾರತಿ, ಪ್ರಸಾದ ವಿನಿಯೋಗ, ಅನ್ನಸಂತರ್ಪಣೆ ನಡೆಯಿತು. ಸುಂಟಿಕೊಪ್ಪ, ಗದ್ದೆಹಳ್ಳ, ಬಾಳೆಕಾಡು, ಕೆದಕಲ್, ಕಂಬಿಬಾಣೆ, ಮಾದಾಪುರ ಸೇರಿ ಕೇರಳ ರಾಜ್ಯದ ಭಕ್ತರು ಆಗಮಿಸಿದ್ದರು. ದೇವಾಲಯದ ಮುಖ್ಯಸ್ಥರಾದ ಪಿ.ಆರ್.ಸುಕುಮಾರ್, ಸುನಿಲ್ ಕುಮಾರ್ ಸೇರಿದಂತೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>