ಗುರುವಾರ ಬೆಳಿಗ್ಗೆ ಸಿದ್ದಾಪುರ ಪೊಲೀಸ್ ಠಾಣೆಗೆ ತೆರಳಿದ ಸೋಂಕಿತ ಯುವಕ, ‘ಆಸ್ಪತ್ರೆಯಲ್ಲಿ ವೈದ್ಯರು ಸರಿಯಾಗಿ ನೋಡಿಕೊಳ್ಳುತ್ತಿಲ್ಲ’ ಎಂದು ಹೇಳಿದ್ದಾನೆ. ತಕ್ಷಣ ಎಚ್ಚೆತ್ತುಕೊಂಡ ಪೊಲೀಸರು, ಆತನನ್ನು ಮತ್ತೆ ಆಸ್ಪತ್ರೆಗೆ ದಾಖಲಿಸಲು ಆಂಬುಲೆನ್ಸ್ ಕರೆಸಿದ್ದಾರೆ. ಆದರೆ, ಪೊಲೀಸ್ ಠಾಣೆಗೆ ಆಂಬುಲೆನ್ಸ್ ಬರುತ್ತಿರುವಂತೆಯೇ ಅಲ್ಲಿಂದಲೂ ಆತ ಪರಾರಿಯಾಗಿದ್ದಾನೆ.