ಶನಿವಾರಸಂತೆ (ಕೊಡಗು): ದುಂಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಜೂರು ಗ್ರಾಮದಲ್ಲಿ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಪರೀಕ್ಷಾ ಭೀತಿಯಿಂದ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಶನಿವಾರಸಂತೆಯ ಭಾರತಿ ವಿದ್ಯಾಸಂಸ್ಥೆಯ ಪ್ರೌಢಶಾಲೆ ವಿದ್ಯಾರ್ಥಿ, ಗಾರೆ ಕೆಲಸದ ಕಾರ್ಮಿಕ ಜಿತೇಂದ್ರ ಅವರ ಪುತ್ರ ರಿಷಿ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಪರೀಕ್ಷೆ ದಿನಾಂಕ ಪ್ರಕಟವಾದ ಬಳಿಕ ಆತಂಕಕ್ಕೆ ಒಳಗಾಗಿದ್ದ. ತಂದೆ, ತಾಯಿ ಕೆಲಸಕ್ಕೆ ಹೋದ ಬಳಿಕ ನೇಣು ಹಾಕಿಕೊಂಡಿದ್ದಾನೆ. ಶನಿವಾರಸಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.