ಸೋಮವಾರ, 8 ಡಿಸೆಂಬರ್ 2025
×
ADVERTISEMENT
ADVERTISEMENT

ಅತಿಯಾದ ರಸಗೊಬ್ಬರ; ಕಾಫಿಗೆ ಪ್ರತಿಕೂಲ: ಧರ್ಮರಾಜ

Published : 8 ಅಕ್ಟೋಬರ್ 2024, 4:10 IST
Last Updated : 8 ಅಕ್ಟೋಬರ್ 2024, 4:10 IST
ಫಾಲೋ ಮಾಡಿ
Comments
ಹಲವು ತಜ್ಞರು ವಿಚಾರ ಸಂಕಿರಣದಲ್ಲಿ ಭಾಗಿ ಹಲವು ಸಾಧಕರಿಗೆ ಸನ್ಮಾನ ಕಾಲಕಾಲಕ್ಕೆ ಮಣ್ಣು ಪರೀಕ್ಷೆ ಮಾಡಸಲು ಸಲಹೆ
ಕೊಡಗಿನ ಕಾಫಿ ಬೆಳೆ ಪ್ರಗತಿ ಹಾಗೂ ಸಾಧಕರ ಬಗ್ಗೆ ದಾಖಲೀಕರಣವಾಗಬೇಕು. ಆ ನಿಟ್ಟಿನಲ್ಲಿ ಜಿಲ್ಲಾಡಳಿತ ಕಾಫಿ ಟೇಬಲ್ ಹೊರತರಲು ಪ್ರಯತ್ನಿಸಲಿದೆ
ವೆಂಕಟ್ ರಾಜಾ ಜಿಲ್ಲಾಧಿಕಾರಿ.
ಕಾಫಿ ಬೆಳೆಯನ್ನು ಮತ್ತಷ್ಟು ಔನತ್ಯಕ್ಕೆ ಕೊಂಡೊಯ್ಯಬೇಕು; ಡಾ.ಮಂತರ್‌ಗೌಡ
ಕೊಡಗು ಜಿಲ್ಲೆಯಲ್ಲಿ ಕಾ‍ಫಿ ಬೆಳೆಯನ್ನು ಮತ್ತಷ್ಟು ಔನತ್ಯಕ್ಕೆ ಕೊಂಡೊಯ್ಯಬೇಕು. ಹಾಗಾಗಿಯೇ ಕಾಫಿ ದಸರೆಯನ್ನು ಆಯೋಜಿಸಲಾಗಿದೆ ಎಂದು ಶಾಸಕ ಡಾ.ಮಂತರ್‌ಗೌಡ ತಿಳಿಸಿದರು. ಕಾಫಿ ದಸರಾ ವಿಚಾರ ಸಂಕಿರಣದಲ್ಲಿ ವಿವಿಧ ತಜ್ಞರು ವಿಜ್ಞಾನಿಗಳು ಕೃಷಿಕರು ಪಾಲ್ಗೊಂಡು ಕಾಫಿ ಉತ್ತೇಜನ ಸಂಬಂಧಿಸಿದಂತೆ ಹಲವು ಅಭಿಪ್ರಾಯ ಸಲಹೆ ಮಾರ್ಗದರ್ಶನ ನೀಡಿದ್ದಾರೆ. ತಜ್ಞರ ಅಭಿಪ್ರಾಯವನ್ನು ಕ್ರೊಢೀಕರಿಸಿ ಕಾಫಿ ಬೆಳೆಯಲ್ಲಿ ಮತ್ತಷ್ಟು ಉತ್ತಮ ಇಳುವರಿ ಪಡೆಯಲು ಶ್ರಮಿಸಬೇಕಿದೆ ಎಂದರು.
ಸಾಧಕ ಕೃಷಿಕರಿಗೆ ಸನ್ಮಾನ
ಸಾಧಕ ಕೃಷಿಕರಾದ ನಡಿಕೇರಿಯಂಡ ಬೋಸ್ ಮಂದಣ್ಣ ಕರಡದ ಬಿದಿರು ಕೃಷಿಕ ನಿಖಿಲ್ ರಾಮಮೂರ್ತಿ ಯಂತ್ರೋಪಕರಣಗಳ ತಯಾರಿಕೆಗಾಗಿ ವಿ.ಎ.ತಾಹಿರ್ ಜೇನುಕೃಷಿ ಸಾಧಕರಾದ ಶಿರಕಜೆ ಮಾದಪ್ಪ ಮರಗೋಡು ಗ್ರಾಮದ ಕಟ್ಟೆಮನೆ ಪ್ರೇಮಗಣೇಶ್ ಕರಿಮೆಣಸು ಕೃಷಿ ಸಾಧಕ ಎ.ಪಿ.ಸುಬ್ಬಯ್ಯ ಭತ್ತ ಕೃಷಿಕ ದೊಡ್ಡಳ್ಳಿ ಗ್ರಾಮದ ಬಸವಣ್ಣಯ್ಯ ಮತ್ತು ಹುಲುಸೆ ಗ್ರಾಮದ ಎಚ್.ಪಿ.ಪ್ರಸನ್ನ ಹಾಗೂ ಕೊಡಗು ಕಾಫಿ ಮಹಿಳಾ ಜಾಗೃತಿ ಸಂಘವನ್ನು ಸನ್ಮಾನಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT