<p><strong>ಸೋಮವಾರಪೇಟೆ:</strong> ‘ಸರ್ಕಾರಿ ನೌಕರರ ಆರೋಗ್ಯ ಸಂಜೀವಿನಿ ಸೇವೆ ನಿವೃತ್ತರಿಗೂ ವಿಸ್ತರಿಸಿದಲ್ಲಿ, ಎಲ್ಲರಿಗೂ ಅನುಕೂಲವಾಗುವುದು’ ಎಂದು ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ.ಕೆ.ಮಲ್ಲಪ್ಪ ಹೇಳಿದರು.</p>.<p>ಪಟ್ಟಣದಲ್ಲಿ ಮಂಗಳವಾರ ನಡೆದ ಸರ್ಕಾರಿ ನಿವೃತ್ತ ನೌಕರರ ಸಂಘದ ವಾರ್ಷಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಸಂಘದಲ್ಲಿ 150 ಜನ ಸದಸ್ಯರಿದ್ದಾರೆ. ಪ್ರಸಕ್ತ ಸಾಲಿನಲ್ಲಿ 20 ಮಂದಿ ಹೊಸ ಸದಸ್ಯತ್ವ ಪಡೆದಿದ್ದಾರೆ. ಆದರೆ, ಸದಸ್ಯರು ಕಾರ್ಯೋನ್ಮುಖರಾಗಿಲ್ಲ. ಸಂಘ, ಸಂಸ್ಥೆಗಳ ಸದಸ್ಯರು ಸಂಘದ ಕಾರ್ಯ ಚಟುವಟಿಕೆಗಳಲ್ಲಿ ಪಾಲ್ಗೊಂಡಾಗ ಮಾತ್ರ ಸಂಘಗಳ ಅಭಿವೃದ್ಧಿ ಸಾಧ್ಯ ಎಂದರು.</p>.<p>ಸಂಘದ ಸದಸ್ಯರಾದ ಕೆ.ಟಿ.ಚೆಲುವೆ ಗೌಡ, ಎ.ಬಿ.ಶಿವದೇವಿ ಅವರನ್ನು ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಸಿ.ಕೆ.ಮಲ್ಲಪ್ಪ ರಚಿತ ನಾಡಹನಿ ಕಥಸಂಕಲನವನ್ನು ಗೌರವ ಅಧ್ಯಕ್ಷ ಹಾಲೇಬೇಲೂರು ನಿರ್ವಾಣಿಶೆಟ್ಟಿ ಬಿಡುಗಡೆ ಮಾಡಿದರು.</p>.<p>ಕಾರ್ಯದರ್ಶಿ ಬಿ.ಎಂ.ಆನಂದ, ಖಜಾಂಜಿ ಎಸ್.ಆರ್.ಕೆಂಚೇಗೌಡ, ಸಹ ಕಾರ್ಯದರ್ಶಿ ಎಸ್.ಬಿ.ರಾಜಪ್ಪ, ನಿರ್ದೇಶಕರಾದ ಎಚ್.ಎನ್.ತಂಗಮ್ಮ, ಟಿ.ಕೆ.ಮಾಚಯ್ಯ, ಎಚ್.ಜಿ.ಕುಟ್ಟಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋಮವಾರಪೇಟೆ:</strong> ‘ಸರ್ಕಾರಿ ನೌಕರರ ಆರೋಗ್ಯ ಸಂಜೀವಿನಿ ಸೇವೆ ನಿವೃತ್ತರಿಗೂ ವಿಸ್ತರಿಸಿದಲ್ಲಿ, ಎಲ್ಲರಿಗೂ ಅನುಕೂಲವಾಗುವುದು’ ಎಂದು ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ.ಕೆ.ಮಲ್ಲಪ್ಪ ಹೇಳಿದರು.</p>.<p>ಪಟ್ಟಣದಲ್ಲಿ ಮಂಗಳವಾರ ನಡೆದ ಸರ್ಕಾರಿ ನಿವೃತ್ತ ನೌಕರರ ಸಂಘದ ವಾರ್ಷಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಸಂಘದಲ್ಲಿ 150 ಜನ ಸದಸ್ಯರಿದ್ದಾರೆ. ಪ್ರಸಕ್ತ ಸಾಲಿನಲ್ಲಿ 20 ಮಂದಿ ಹೊಸ ಸದಸ್ಯತ್ವ ಪಡೆದಿದ್ದಾರೆ. ಆದರೆ, ಸದಸ್ಯರು ಕಾರ್ಯೋನ್ಮುಖರಾಗಿಲ್ಲ. ಸಂಘ, ಸಂಸ್ಥೆಗಳ ಸದಸ್ಯರು ಸಂಘದ ಕಾರ್ಯ ಚಟುವಟಿಕೆಗಳಲ್ಲಿ ಪಾಲ್ಗೊಂಡಾಗ ಮಾತ್ರ ಸಂಘಗಳ ಅಭಿವೃದ್ಧಿ ಸಾಧ್ಯ ಎಂದರು.</p>.<p>ಸಂಘದ ಸದಸ್ಯರಾದ ಕೆ.ಟಿ.ಚೆಲುವೆ ಗೌಡ, ಎ.ಬಿ.ಶಿವದೇವಿ ಅವರನ್ನು ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಸಿ.ಕೆ.ಮಲ್ಲಪ್ಪ ರಚಿತ ನಾಡಹನಿ ಕಥಸಂಕಲನವನ್ನು ಗೌರವ ಅಧ್ಯಕ್ಷ ಹಾಲೇಬೇಲೂರು ನಿರ್ವಾಣಿಶೆಟ್ಟಿ ಬಿಡುಗಡೆ ಮಾಡಿದರು.</p>.<p>ಕಾರ್ಯದರ್ಶಿ ಬಿ.ಎಂ.ಆನಂದ, ಖಜಾಂಜಿ ಎಸ್.ಆರ್.ಕೆಂಚೇಗೌಡ, ಸಹ ಕಾರ್ಯದರ್ಶಿ ಎಸ್.ಬಿ.ರಾಜಪ್ಪ, ನಿರ್ದೇಶಕರಾದ ಎಚ್.ಎನ್.ತಂಗಮ್ಮ, ಟಿ.ಕೆ.ಮಾಚಯ್ಯ, ಎಚ್.ಜಿ.ಕುಟ್ಟಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>