<p><strong>ಕುಶಾಲನಗರ:</strong> ‘ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ನಿರಂತರ ಅಧ್ಯಯನ ಮಾಡಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯುವುದರ ಜೊತೆಗೆ ಉತ್ತಮ ಜೀವನಮೌಲ್ಯಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಸಂಪನ್ಮೂಲ ವ್ಯಕ್ತಿ ಉ.ರಾ.ನಾಗೇಶ್ ಹೇಳಿದರು.</p>.<p>ಪಟ್ಟಣದ ಬೈಚನಹಳ್ಳಿ ಬಳಿ ಇರುವ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. </p>.<p>‘ದ್ವಿತೀಯ ಪಿಯುಸಿ ಪರೀಕ್ಷೆ ಹತ್ತಿರ ಬಂದಿದ್ದು, ಸಮಯವನ್ನು ವ್ಯರ್ಥ ಮಾಡದೆ ಮೊಬೈಲ್ ಬಳಕೆಯನ್ನು ದೂರ ಮಾಡಿ ಓದಿನ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ಕಠಿಣ ಪರಿಸ್ಥಿತಿಯನ್ನು ಎದುರಿಸುವ ಛಲವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು’ ಎಂದರು.</p>.<p>ವಿವೇಕಾನಂದ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಎನ್.ಎನ್.ಶಂಭುಲಿಂಗಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಸಮಾಜದ ಆಧಾರ ಸ್ತಂಭವಾಗಬೇಕು’ ಎಂದರು.<br /> ಪ್ರಾಂಶುಪಾಲೆ ಕ್ಲಾರ ರೇಷ್ಮಾ ಶುಭಹಾರೈಸಿದರು. ಸಾಹಿತ್ಯ ಸೇವೆಗೆ ಹಾಗೂ ಉತ್ತಮ ನಿರೂಪಕ ಪ್ರಶಸ್ತಿ ಪುರಸ್ಕೃತ ಉ.ರಾ.ನಾಗೇಶ್ ಅವರನ್ನು ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು. ಕಾಲೇಜು ಆಡಳಿತ ಮಂಡಳಿ ಪದಾಧಿಕಾರಿಗಳು,<br /> ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<p>ಪ್ರಥಮ ಪಿಯು ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಮನ ರಂಜಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ:</strong> ‘ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ನಿರಂತರ ಅಧ್ಯಯನ ಮಾಡಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯುವುದರ ಜೊತೆಗೆ ಉತ್ತಮ ಜೀವನಮೌಲ್ಯಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಸಂಪನ್ಮೂಲ ವ್ಯಕ್ತಿ ಉ.ರಾ.ನಾಗೇಶ್ ಹೇಳಿದರು.</p>.<p>ಪಟ್ಟಣದ ಬೈಚನಹಳ್ಳಿ ಬಳಿ ಇರುವ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. </p>.<p>‘ದ್ವಿತೀಯ ಪಿಯುಸಿ ಪರೀಕ್ಷೆ ಹತ್ತಿರ ಬಂದಿದ್ದು, ಸಮಯವನ್ನು ವ್ಯರ್ಥ ಮಾಡದೆ ಮೊಬೈಲ್ ಬಳಕೆಯನ್ನು ದೂರ ಮಾಡಿ ಓದಿನ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ಕಠಿಣ ಪರಿಸ್ಥಿತಿಯನ್ನು ಎದುರಿಸುವ ಛಲವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು’ ಎಂದರು.</p>.<p>ವಿವೇಕಾನಂದ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಎನ್.ಎನ್.ಶಂಭುಲಿಂಗಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಸಮಾಜದ ಆಧಾರ ಸ್ತಂಭವಾಗಬೇಕು’ ಎಂದರು.<br /> ಪ್ರಾಂಶುಪಾಲೆ ಕ್ಲಾರ ರೇಷ್ಮಾ ಶುಭಹಾರೈಸಿದರು. ಸಾಹಿತ್ಯ ಸೇವೆಗೆ ಹಾಗೂ ಉತ್ತಮ ನಿರೂಪಕ ಪ್ರಶಸ್ತಿ ಪುರಸ್ಕೃತ ಉ.ರಾ.ನಾಗೇಶ್ ಅವರನ್ನು ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು. ಕಾಲೇಜು ಆಡಳಿತ ಮಂಡಳಿ ಪದಾಧಿಕಾರಿಗಳು,<br /> ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<p>ಪ್ರಥಮ ಪಿಯು ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಮನ ರಂಜಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>