ಜಿಲ್ಲೆಯಲ್ಲಿ ವಾಣಿಜ್ಯ ಬ್ಯಾಂಕ್ನ 145 ಶಾಖೆಗಳಿವೆ. ಈ ಬ್ಯಾಂಕ್ನಲ್ಲಿ 17,780 ರೈತರು ₹1,350 ಕೋಟಿ ಬೆಳೆಸಾಲ ಪಡೆದುಕೊಂಡಿದ್ದಾರೆ. ಜನವರಿ 2ನೇ ವಾರದ ತನಕವೂ ಟೋಕನ್ ವಿತರಣೆ ಮಾಡಲಾಗುತ್ತದೆ. ಆದ್ದರಿಂದ, ರೈತರು ಆತಂಕ ಹಾಗೂ ಗೊಂದಲಕ್ಕೆ ಒಳಗಾಗುವ ಅಗತ್ಯವಿಲ್ಲ. ಎಲ್ಲರಿಗೂ ಸೌಲಭ್ಯ ಕಲ್ಪಿಸಲಾಗುವುದು ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾಹಿತಿ ನೀಡಿದರು.