ಮಡಿಕೇರಿ: ಭಾಗಮಂಡಲ, ಕರಿಕೆ, ಕುಂದಚೇರಿ ಹಾಗೂ ಅಯ್ಯಂಗೇರಿ ಭಾಗಗಳಲ್ಲಿ ಈ ಬಾರಿ ಅಧಿಕ ಮಳೆ ಸುರಿದು ಕಾಫಿ, ಕರಿಮೆಣಸು, ಏಲಕ್ಕಿ, ತೆಂಗು, ಅಡಿಕೆ, ಭತ್ತದ ಬೆಳೆಗಳು ನಾಶವಾಗಿವೆ. ಸರ್ಕಾರ ಪರಿಹಾರ ನೀಡದಿದ್ದಲ್ಲಿ ಬೆಳೆಗಾರರು ಸರ್ವನಾಶವಾಗಲಿದ್ದಾರೆ ಎಂದು ಈ ಭಾಗದ ರೈತರು ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅಳಲು ತೋಡಿಕೊಂಡರು.