<p><strong>ಸೋಮವಾರಪೇಟೆ:</strong> ಸಮೀಪದ ಗೋಣಿಮರೂರು ಜೇನುಕುರುಬರ ಹಾಡಿಯಲ್ಲಿ ಶುಕ್ರವಾರ ದೊಣ್ಣೆಯಿಂದ ಹೊಡೆದು ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಲಾಗಿದೆ.</p>.<p>ಗೋಣಿಮರೂರು ಹಾಡಿ ನಿವಾಸಿ ಕರಿಯಪ್ಪ (46) ಅವರನ್ನು ಪುತ್ರ ಲೋಕೇಶ್(25) ಹತ್ಯೆ ಮಾಡಿದ್ದು, ಇವನ ತಾಯಿ ಲೀಲಾ (38) ತೀವ್ರ ಗಾಯಗೊಂಡಿದ್ದಾರೆ.</p>.<p>ಶುಕ್ರವಾರ ರಾತ್ರಿ ಮದ್ಯಪಾನ ಮಾಡಲು ತಂದೆ ಕರಿಯಪ್ಪ ಬಳಿ ಲೋಕೇಶ್ ಹಣ ಕೇಳಿದ್ದು, ಅವರು ನಿಕಾರಿಸಿದ್ದಾರೆ. ಇದರಿಂದ ಸಿಟ್ಟಿಗೆದ್ದ ಮಗ ಮರದ ದೊಣ್ಣೆಯಿಂದ ತಲೆ ಭಾಗಕ್ಕೆ ಹಲ್ಲೆ ನಡೆಸಿದ್ದಾನೆ. ಇದನ್ನು ತಡೆಯಲು ಬಂದ ತಾಯಿ ಲೀಲಾ ಅವರ ಮೇಲೂ ಹಲ್ಲೆ ನಡೆಸಿದ್ದಾನೆ.</p>.<p>ತಲೆ ಭಾಗಕ್ಕೆ ಗಂಭೀರ ಗಾಯವಾಗಿದ್ದರಿಂದ ಕರಿಯಪ್ಪ ಅವರು ಸ್ಥಳದಲ್ಲೇ ಬಿದ್ದು ಮೃತಪಟ್ಟಿದ್ದಾರೆ.ಲೀಲಾ ಅವರಿಗೂ ಗಂಭೀರ ಪ್ರಮಾಣದ ಗಾಯಗಳುಂಟಾಗಿದ್ದು, ಮೈಸೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ.</p>.<p>ಶನಿವಾರ ಮಧ್ಯಾಹ್ನ ಬಾಣಾವರ ಸಮೀಪದಲ್ಲಿ ಅರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಡಿವೈಎಸ್ ಪಿ ಶೈಲೇಂದ್ರ, ವೃತ್ತ ನಿರೀಕ್ಷಕ ನಂಜುಂಡೇಗೌಡ, ಠಾಣಾಧಿಕಾರಿ ಶಿವಶಂಕರ್ ನೇತೃತ್ವದಲ್ಲಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋಮವಾರಪೇಟೆ:</strong> ಸಮೀಪದ ಗೋಣಿಮರೂರು ಜೇನುಕುರುಬರ ಹಾಡಿಯಲ್ಲಿ ಶುಕ್ರವಾರ ದೊಣ್ಣೆಯಿಂದ ಹೊಡೆದು ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಲಾಗಿದೆ.</p>.<p>ಗೋಣಿಮರೂರು ಹಾಡಿ ನಿವಾಸಿ ಕರಿಯಪ್ಪ (46) ಅವರನ್ನು ಪುತ್ರ ಲೋಕೇಶ್(25) ಹತ್ಯೆ ಮಾಡಿದ್ದು, ಇವನ ತಾಯಿ ಲೀಲಾ (38) ತೀವ್ರ ಗಾಯಗೊಂಡಿದ್ದಾರೆ.</p>.<p>ಶುಕ್ರವಾರ ರಾತ್ರಿ ಮದ್ಯಪಾನ ಮಾಡಲು ತಂದೆ ಕರಿಯಪ್ಪ ಬಳಿ ಲೋಕೇಶ್ ಹಣ ಕೇಳಿದ್ದು, ಅವರು ನಿಕಾರಿಸಿದ್ದಾರೆ. ಇದರಿಂದ ಸಿಟ್ಟಿಗೆದ್ದ ಮಗ ಮರದ ದೊಣ್ಣೆಯಿಂದ ತಲೆ ಭಾಗಕ್ಕೆ ಹಲ್ಲೆ ನಡೆಸಿದ್ದಾನೆ. ಇದನ್ನು ತಡೆಯಲು ಬಂದ ತಾಯಿ ಲೀಲಾ ಅವರ ಮೇಲೂ ಹಲ್ಲೆ ನಡೆಸಿದ್ದಾನೆ.</p>.<p>ತಲೆ ಭಾಗಕ್ಕೆ ಗಂಭೀರ ಗಾಯವಾಗಿದ್ದರಿಂದ ಕರಿಯಪ್ಪ ಅವರು ಸ್ಥಳದಲ್ಲೇ ಬಿದ್ದು ಮೃತಪಟ್ಟಿದ್ದಾರೆ.ಲೀಲಾ ಅವರಿಗೂ ಗಂಭೀರ ಪ್ರಮಾಣದ ಗಾಯಗಳುಂಟಾಗಿದ್ದು, ಮೈಸೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ.</p>.<p>ಶನಿವಾರ ಮಧ್ಯಾಹ್ನ ಬಾಣಾವರ ಸಮೀಪದಲ್ಲಿ ಅರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಡಿವೈಎಸ್ ಪಿ ಶೈಲೇಂದ್ರ, ವೃತ್ತ ನಿರೀಕ್ಷಕ ನಂಜುಂಡೇಗೌಡ, ಠಾಣಾಧಿಕಾರಿ ಶಿವಶಂಕರ್ ನೇತೃತ್ವದಲ್ಲಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>