ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಗನಿಂದಲೇ ತಂದೆಯ ಹತ್ಯೆ

ಕುಡಿತಕ್ಕೆ ಹಣ ನೀಡದ ಕಾರಣ, ದೊಣ್ಣೆಯಿಂದ ಹೊಡೆದು ಕೃತ್ಯ
Last Updated 18 ಜನವರಿ 2020, 14:28 IST
ಅಕ್ಷರ ಗಾತ್ರ

ಸೋಮವಾರಪೇಟೆ: ಸಮೀಪದ ಗೋಣಿಮರೂರು ಜೇನುಕುರುಬರ ಹಾಡಿಯಲ್ಲಿ ಶುಕ್ರವಾರ ದೊಣ್ಣೆಯಿಂದ ಹೊಡೆದು ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಲಾಗಿದೆ.

ಗೋಣಿಮರೂರು ಹಾಡಿ ನಿವಾಸಿ ಕರಿಯಪ್ಪ (46) ಅವರನ್ನು ಪುತ್ರ ಲೋಕೇಶ್(25) ಹತ್ಯೆ ಮಾಡಿದ್ದು, ಇವನ ತಾಯಿ ಲೀಲಾ (38) ತೀವ್ರ ಗಾಯಗೊಂಡಿದ್ದಾರೆ.

ಶುಕ್ರವಾರ ರಾತ್ರಿ ಮದ್ಯಪಾನ ಮಾಡಲು ತಂದೆ ಕರಿಯಪ್ಪ ಬಳಿ ಲೋಕೇಶ್ ಹಣ ಕೇಳಿದ್ದು, ಅವರು ನಿಕಾರಿಸಿದ್ದಾರೆ. ಇದರಿಂದ ಸಿಟ್ಟಿಗೆದ್ದ ಮಗ ಮರದ ದೊಣ್ಣೆಯಿಂದ ತಲೆ ಭಾಗಕ್ಕೆ ಹಲ್ಲೆ ನಡೆಸಿದ್ದಾನೆ. ಇದನ್ನು ತಡೆಯಲು ಬಂದ ತಾಯಿ ಲೀಲಾ ಅವರ ಮೇಲೂ ಹಲ್ಲೆ ನಡೆಸಿದ್ದಾನೆ.

ತಲೆ ಭಾಗಕ್ಕೆ ಗಂಭೀರ ಗಾಯವಾಗಿದ್ದರಿಂದ ಕರಿಯಪ್ಪ ಅವರು ಸ್ಥಳದಲ್ಲೇ ಬಿದ್ದು ಮೃತಪಟ್ಟಿದ್ದಾರೆ.ಲೀಲಾ ಅವರಿಗೂ ಗಂಭೀರ ಪ್ರಮಾಣದ ಗಾಯಗಳುಂಟಾಗಿದ್ದು, ಮೈಸೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ.

ಶನಿವಾರ ಮಧ್ಯಾಹ್ನ ಬಾಣಾವರ ಸಮೀಪದಲ್ಲಿ ಅರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಡಿವೈಎಸ್ ಪಿ ಶೈಲೇಂದ್ರ, ವೃತ್ತ ನಿರೀಕ್ಷಕ ನಂಜುಂಡೇಗೌಡ, ಠಾಣಾಧಿಕಾರಿ ಶಿವಶಂಕರ್ ನೇತೃತ್ವದಲ್ಲಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT