ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಇಸಾಕ್ಖಾನ್ ಅವರು ಝಬಿಯುಲ್ಲಾ ಮಾತನಾಡಿ, ಪಟ್ಟಣ ಪಂಚಾಯಿತಿ ಸದಸ್ಯೆ ಸುರಯ್ಯಬಾನು ಅವರು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಕಾರಣಕ್ಕೆ ಅಸಮಾಧಾನಗೊಂಡ ಕಾರ್ಯಕರ್ತ ಝಬಿಯುಲ್ಲಾ ಸಹಜವಾಗಿ ಪ್ರತಿಭಟನೆ ನಡೆಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ನಡೆಸುವುದು ಎಲ್ಲರ ಹಕ್ಕು. ಆದರೆ, ಪೊಲೀಸರು ಝಬಿಯುಲ್ಲಾ ಅವರನ್ನು ವಶಕ್ಕೆ ಪಡೆದಿರುವುದು ಮಾತ್ರ ಖಂಡನೀಯ ಎಂದು ಹೇಳಿದರು.