ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗಿನಲ್ಲಿ ‘ಆನಂದ್’ ಚಿತ್ರದ ಚಿತ್ರೀಕರಣ

ಹ್ಯಾಟ್ರಿಕ್‌ ಹೋರೋ ಶಿವರಾಜ್‌ ಕುಮಾರ್‌ ಭಾಗಿ
Last Updated 4 ಜೂನ್ 2019, 13:20 IST
ಅಕ್ಷರ ಗಾತ್ರ

ಮಡಿಕೇರಿ: ಸುಂದರ ಪ್ರಕೃತಿಯ ಮಡಿಲು ಕೊಡಗಿನ ಪರಿಸರದಲ್ಲಿ ‘ಹ್ಯಾಟ್ರಿಕ್ ಹೀರೋ’ ಶಿವರಾಜ್ ಕುಮಾರ್ ಅಭಿನಯದ ‘ಆನಂದ್’ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ.

ಪಿ.ವಾಸು ನಿರ್ದೇಶನದಲ್ಲಿ, ಯೋಗಿ ದ್ವಾರಕೀಶ್ ನಿರ್ಮಾಪಕರಾಗಿರುವ ಚಿತ್ರದ ಹಾಡು ಹಾಗೂ ಸಾಹಸ ದೃಶ್ಯಗಳನ್ನು ಮದೆನಾಡಿನ ಕಲ್ಲುಕ್ವಾರಿ ಹಾಗೂ ಕೊಯನಾಡಿನ ಅರಣ್ಯ ಪ್ರದೇಶದಲ್ಲಿ ಚಿತ್ರೀಕರಿಸಲಾಗುತ್ತಿದೆ.

ರಚಿತಾ ರಾಮ್ ನಾಯಕಿ ಆಗಿರುವ ಚಿತ್ರಕ್ಕೆ ಗುರುಕಿರಣ್ ಅವರ ಸಂಗೀತ ನಿರ್ದೇಶನವಿದ್ದು, ಸಾಧು ಕೋಕಿಲ, ರಂಗಾಯಣ ರಗು, ಸುಹಾಸಿನಿ, ಅನಂತ್ ನಾಗ್ ಸೇರಿದಂತೆ 35ಕ್ಕೂ ಅಧಿಕ ಕಲಾವಿದರು ನಟಿಸುತ್ತಿದ್ದಾರೆ.

ಈಗಾಗಲೇ ರಾಜ್ಯದ ವಿವಿಧೆಡೆ 67 ದಿನ ಚಿತ್ರದ ಚಿತ್ರೀಕರಣ ಮುಗಿದಿದ್ದು, ಕೊಡಗಿನಲ್ಲಿ 6 ದಿನ ಚಿತ್ರೀಕರಣ ನಡೆಯಲಿದೆ. ಬಳಿಕ ಹೈದರಾಬಾದ್ರಾ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಕ್ಲೈಮ್ಯಾಕ್ಸ್ ಶೂಟಿಂಗ್ ನಡೆಯಲಿದೆ ಎಂದು ಚಿತ್ರತಂಡವು ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT