<p><strong>ಸೋಮವಾರಪೇಟೆ</strong>: ತಾಲ್ಲೂಕಿನ ಕಿಕ್ಕರಳ್ಳಿಯಲ್ಲಿ ಕಳೆದ ಶನಿವಾರ ಅರಣ್ಯಕ್ಕೆ ಬೆಂಕಿ ಬಿದ್ದ ಸಂದರ್ಭ ಪಕ್ಕದ ಕಾಫಿ ಮತ್ತು ಏಲಕ್ಕಿ ತೋಟಗಳಿಗೂ ಬೆಂಕಿ ವ್ಯಾಪಿಸಿದ್ದು, ಸಾಕಷ್ಟು ಹಾನಿಯಾಗಿದೆ.</p>.<p>ಗ್ರಾಮ ನಿವಾಸಿ ಅನಿಲ್ ಕುಮಾರ್ ಸೇರಿದಂತೆ ಅಕ್ಕಪಕ್ಕದ ರೈತರ ಜಮೀನಿನಲ್ಲಿದ್ದ ಕಾಫಿ, ಏಲಕ್ಕಿ ಗಿಡಗಳು, ನೀರಿನ ಪೈಪ್ಗಳು, ಜೇನುಪೆಟ್ಟಿಗೆಗಳು ಸುಟ್ಟು ಹೋಗಿವೆ.</p>.<p>‘ಅತಿ ಹೆಚ್ಚು ಮಳೆ ಬೀಳುವ ಪ್ರದೇಶದಲ್ಲಿ ಕೃಷಿ ಮಾಡುವುದೇ ಕಷ್ಟಕರವಾಗಿದೆ. ಉತ್ಪಾದನಾ ವೆಚ್ಚ ಜಾಸ್ತಿಯಾಗಿದೆ. ಮಳೆಗಾಲದಲ್ಲಿ ರೋಗಬಾಧೆಯಿಂದ ಕಾಫಿ, ಏಲಕ್ಕಿಯನ್ನು ಉಳಿಸಿಕೊಳ್ಳುವುದೇ ದುಸ್ತರ. ಕಾಫಿ ಗಿಡಗಳಿಗೆ 15 ವರ್ಷವಾಗಿತ್ತು. ಉತ್ತಮ ಫಸಲು ಬಂದಿದ್ದು, ಕೊಯ್ಲು ಮಾಡುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ’ ಎಂದು ಅನಿಲ್ ಅಳಲು ತೋಡಿಕೊಂಡರು.</p>.<p>‘ಪರಿಹಾರಕ್ಕಾಗಿ ಅರಣ್ಯ ಇಲಾಖೆ, ಕಂದಾಯ ಇಲಾಖೆ, ತೋಟಗಾರಿಕಾ ಇಲಾಖೆಗೆ ಅರ್ಜಿ ಸಲ್ಲಿಸಿದರೂ, ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಮುಂದೆ ಏನು ಮಾಡಬೇಕೆಂದು ತೋಚುತ್ತಿಲ್ಲ’ ಎಂದು ನೋವು ತೋಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋಮವಾರಪೇಟೆ</strong>: ತಾಲ್ಲೂಕಿನ ಕಿಕ್ಕರಳ್ಳಿಯಲ್ಲಿ ಕಳೆದ ಶನಿವಾರ ಅರಣ್ಯಕ್ಕೆ ಬೆಂಕಿ ಬಿದ್ದ ಸಂದರ್ಭ ಪಕ್ಕದ ಕಾಫಿ ಮತ್ತು ಏಲಕ್ಕಿ ತೋಟಗಳಿಗೂ ಬೆಂಕಿ ವ್ಯಾಪಿಸಿದ್ದು, ಸಾಕಷ್ಟು ಹಾನಿಯಾಗಿದೆ.</p>.<p>ಗ್ರಾಮ ನಿವಾಸಿ ಅನಿಲ್ ಕುಮಾರ್ ಸೇರಿದಂತೆ ಅಕ್ಕಪಕ್ಕದ ರೈತರ ಜಮೀನಿನಲ್ಲಿದ್ದ ಕಾಫಿ, ಏಲಕ್ಕಿ ಗಿಡಗಳು, ನೀರಿನ ಪೈಪ್ಗಳು, ಜೇನುಪೆಟ್ಟಿಗೆಗಳು ಸುಟ್ಟು ಹೋಗಿವೆ.</p>.<p>‘ಅತಿ ಹೆಚ್ಚು ಮಳೆ ಬೀಳುವ ಪ್ರದೇಶದಲ್ಲಿ ಕೃಷಿ ಮಾಡುವುದೇ ಕಷ್ಟಕರವಾಗಿದೆ. ಉತ್ಪಾದನಾ ವೆಚ್ಚ ಜಾಸ್ತಿಯಾಗಿದೆ. ಮಳೆಗಾಲದಲ್ಲಿ ರೋಗಬಾಧೆಯಿಂದ ಕಾಫಿ, ಏಲಕ್ಕಿಯನ್ನು ಉಳಿಸಿಕೊಳ್ಳುವುದೇ ದುಸ್ತರ. ಕಾಫಿ ಗಿಡಗಳಿಗೆ 15 ವರ್ಷವಾಗಿತ್ತು. ಉತ್ತಮ ಫಸಲು ಬಂದಿದ್ದು, ಕೊಯ್ಲು ಮಾಡುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ’ ಎಂದು ಅನಿಲ್ ಅಳಲು ತೋಡಿಕೊಂಡರು.</p>.<p>‘ಪರಿಹಾರಕ್ಕಾಗಿ ಅರಣ್ಯ ಇಲಾಖೆ, ಕಂದಾಯ ಇಲಾಖೆ, ತೋಟಗಾರಿಕಾ ಇಲಾಖೆಗೆ ಅರ್ಜಿ ಸಲ್ಲಿಸಿದರೂ, ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಮುಂದೆ ಏನು ಮಾಡಬೇಕೆಂದು ತೋಚುತ್ತಿಲ್ಲ’ ಎಂದು ನೋವು ತೋಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>