ಗ್ರಾಮದ ಮಲ್ಲಿಕಾರ್ಜುನ ಮತ್ತು ಚಂದ್ರು ಅವರ ಕಾಫಿ ತೋಟಕ್ಕೆ ಸೋಮವಾರ ಮಧ್ಯಾಹ್ನ 3 ಗಂಟೆಯ ವೇಳೆಗೆ ಬೆಂಕಿ ತಗುಲಿದೆ. ಮಳೆಯಿಲ್ಲದೆ, ಒಣಗಿ ನಿಂತಿದ್ದ ಮರಗಳಿಗೆ ಒಮ್ಮೆಲೇ ಬೆಂಕಿ ಹತ್ತಿಕೊಂಡಿದ್ದು, ಕಾಫಿ ತೋಟದ ಅಕ್ಕಪಕ್ಕ ಇದ್ದ ಮನೆಗಳಿಗೂ ಬೆಂಕಿಯ ಕಿಡಿಗಳು ತಾಗಿವೆ. ತಕ್ಷಣ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿ, ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ.