ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶನಿವಾರಸಂತೆ: ಮಾಲಂಬಿ ಮೀಸಲು ಅರಣ್ಯದಲ್ಲಿ ಬೆಂಕಿ

ಬೆಂಕಿ ನಂದಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿ
Last Updated 6 ಮಾರ್ಚ್ 2023, 4:04 IST
ಅಕ್ಷರ ಗಾತ್ರ

ಶನಿವಾರಸಂತೆ: ಸಮೀಪದ ಮಾಲಂಬಿ ಮೀಸಲು ಅರಣ್ಯ ವ್ಯಾಪ್ತಿಯ ದೊಡ್ಡೆರೆ- ಆಲೂರು– ಸಿದ್ದಾಪುರ ಅರಣ್ಯದಲ್ಲಿ ಭಾನುವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದೆ.

ಬೆಂಕಿ ನೋಡಿದ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಶನಿವಾರಸಂತೆ ವಲಯ ಅರಣ್ಯಾಧಿಕಾರಿ ಪ್ರಫುಲ್ ಶೆಟ್ಟಿ ನೇತೃತ್ವದಲ್ಲಿ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ಚುರುಕುಗೊಳಿಸಿದರು.

ಅರಣ್ಯ ಇಲಾಖೆ ಸಿಬ್ಬಂದಿಗಳ ಚುರುಕಿನ ಕಾರ್ಯಾಚರಣೆಯಿಂದ ಆಗಬೇಕಿದ್ದ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ. ಸುಮಾರು 40 ಸೆಂಟ್ ಅರಣ್ಯಭೂಮಿ ಬೆಂಕಿಗೆ ಸುಟ್ಟುಹೋಗಿದೆ. ಬೆಂಕಿ ನಂದಿಸುವ ಕಾರ್ಯದಲ್ಲಿ ಕಾರ್ಗೋಡು ಅರಣ್ಯ ಬೀಟಿನ ಸಿಬ್ಬಂದಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT