ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ನಗರದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಪ್ರಧಾನ ಕಚೇರಿಯಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ನಂತರ ಬೀದರ್ ಜಿಲ್ಲೆಯ ಭಾಲ್ಕಿ ವ್ಯಾಪ್ತಿಯ ಪ್ರಯಾಣಿಕರೊಬ್ಬರು ನಿಗಮದ ಬಸ್ಸಿನಲ್ಲಿ ಬಿಟ್ಟು ಹೋದಂತಹ ಬೆಳ್ಳಿ ಆಭರಣ ಮತ್ತು ಹಣವನ್ನು ಸಂಬಂಧಿಸಿದ ಪ್ರಯಾಣಿಕರಿಗೆ ಪ್ರಾಮಾಣಿಕತೆಯಿಂದ ಒಪ್ಪಿಸಿದ ವಾಹನದ ಚಾಲಕ, ನಿರ್ವಾಹಕರಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಲಾಯಿತು.